Connect with us

    BANTWAL

    ದರೋಡೆಕೋರರ ಮೇಲೆ ಪೊಲೀಸ್ ಫೈರಿಂಗ್ ಮೂವರ ಬಂಧನ

    ದರೋಡೆಕೋರರ ಮೇಲೆ ಪೊಲೀಸ್ ಫೈರಿಂಗ್ ಮೂವರ ಬಂಧನ

    ಮಂಗಳೂರು ಜೂನ್ 1: ದರೋಡೆಕೋರರ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
    ತಡರಾತ್ರಿ ಬಂಟ್ವಾಳ ತಾಲೂಕಿನ ಮಣಿಹಳ್ಳದಲ್ಲಿ ಈ ಘಟನೆ ನಡೆದಿದ್ದು, ದರೋಡೆಗೆ ಸಂಚು ರೂಪಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಮತ್ತು ಬಂಟ್ವಾಳ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.

    ದರೋಡೆಕೋರರನ್ನು ಬಂಧಿಸಲು ಬೆನ್ನಟ್ಟಿದ್ದ ಪೊಲೀಸರು ಕೆಂಪು ಕಲರ್ ಮಾರುತಿ ಸ್ವಿಪ್ಟ್ ಕಾರಿನಲ್ಲಿ ಬರುತ್ತಿದ್ದ ದರೋಡೆಕೋರರನ್ನು ಬಂಧಿಸಲು ಪ್ರಯತ್ನಿಸಿದ್ದಾರೆ. ಬಂಟ್ವಾಳದ ಮಣಿಹಳ್ಳ ಜಂಕ್ಷನ್ನಲ್ಲಿ ಕಾರು ನಿಲ್ಲಿಸಲು ಪೊಲೀಸರು ಸೂಚನೆ ನೀಡಿದಾಗ ಪೊಲೀಸರ ಮೇಲೆಯೇ ಕಾರು ಹರಿಸಲು ದರೋಡೆಕೋರರನ್ನು ಯತ್ನಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಾರು ನಿಲ್ಲಿಸಲು ಪೊಲೀಸರು ದರೋಡೆಕೋರರ ಮೇಲೆ ಫೈರಿಂಗ್ ನಡೆಸಿದ್ದಾರೆ.

    ಪೊಲೀಸರು ಪೈರಿಂಗ್ ಮಾಡುತ್ತಿದ್ದಂತೆ ಕಾರು ನಿಲ್ಲಿಸಿದ ದರೋಡೆಕೋರರು ಪರಾರಿಯಾಗಲು ಯತ್ನಿಸಿದ್ದಾರೆ. ಕಾರಿನಲ್ಲಿದ್ದ ದರೋಡೆಕೋರರ ಪೈಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸದ್ದಾಂ ಮಾರಿಪಳ್ಳ, ಮೌಸೀನ್ ಸುರತ್ಕಲ್, ಮಹಮ್ಮದ್ ಇರ್ಶಾದ್ ಬೊಳ್ಳಾಯಿ ಎಂದು ಗುರುತಿಸಲಾಗಿದೆ.

    ಇಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದು ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತಪ್ಪಿಸಿಕೊಂಡ ಆರೋಪಿಗಳನ್ನು ಮನ್ಸೂರ್ ಅಮ್ಮೆಮಾರ್, ಅಮ್ಮಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ತಲವಾರು ಸಹಿತ ಮಾರಕಾಸ್ತ್ರಗಳು ವಶಕ್ಕೆ ಪಡೆಯಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply