Connect with us

    KARNATAKA

    ಚಿಕ್ಕಮಗಳೂರು : ವಾರಂಟ್ ಜಾರಿ ಮಾಡಿದ್ರೂ ಕೋರ್ಟಿಗೆ ಹಾಜರಾಗದ ರೌಡಿ ಶೀಟರ್‌ ಪೂರ್ಣೇಶ್ ಗೆ ಪೊಲೀಸ್ ಗುಂಡೇಟು..!

    ಚಿಕ್ಕಮಗಳೂರು: ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹಾಜರಾಗದ ರೌಡಿ ಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ.

    ಆರೋಪಿಯನ್ನು ಪೂರ್ಣೇಶ್ (31) ಮೇಲೆ ಬಾಳೆಹೊನ್ನೂರು ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಸುಮಾರು ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಪೂರ್ಣೇಶ್ ನನ್ನು ಬಂಧಿಸಲು ಕೋರ್ಟ್ ವಾರಂಟ್ ಹೊರಡಿಸಿತ್ತು.  ಖಚಿತ ಮಾಹಿತಿ ಮೇರೆಗೆ ಆತ ಅವಿತುಕೊಂಡಿದ್ದ ಸ್ಥಳವನ್ನು ಪೊಲೀಸರು ಸುತ್ತುವರೆದು ಶರಣಾಗಲು ಸೂಚಿಸಿದ್ದರೂ ಈ ವೇಳೆ ಪೊಲೀಸ್ ಸಿಬ್ಬಂದಿ ಮಂಜುನಾಥ್ ಮೇಲೆ ರೌಡಿ ಪೂರ್ಣೇಶ್ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದಾಗ ಪೋಲೀಸರ ಪ್ರಾಣ ರಕ್ಷಣೆ ಉದ್ದೇಶದಿಂದ ಆರೋಪಿಯ ಕಾಲಿಗೆ ಪಿ.ಎಸ್.ಐ.‌ದಿಲೀಪ್ ಕುಮಾರ್ ಫೈರಿಂಗ್ ಮಾಡಿದ್ದಾರೆ.  ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಪೂರ್ಣೇಶ್ ನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply