Connect with us

LATEST NEWS

ಕಂಕನಾಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಜಯಂತ್ ಕುಮಾರ್ ನಿಧನ

ಮಂಗಳೂರು ಸೆಪ್ಟೆಂಬರ್ 20: ತೀವ್ರ ಅನಾರೋಗ್ಯದಿಂದ ಕಂಕನಾಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿದ್ದಾರೆ.


ಹೆಡ್ ಕಾನ್ಸ್ಟೇಬಲ್ ಜಯಂತ್ ಕುಮಾರ್ ಹೆಚ್.ಆರ್. ಮೃತಪಟ್ಟವರು. ಇವರು 1997ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ನೇಮಕಾತಿ ಹೊಂದಿ ಸುಮಾರು 25 ವರ್ಷಗಳಲ್ಲಿ ದಕ್ಷಿಣ ಕನ್ನಡದ ಸುಳ್ಯ ಪೊಲೀಸ್ ಠಾಣೆ, ಮಂಗಳೂರು ನಗರದ ಉತ್ತರ & ದಕ್ಷಿಣ ಪೊಲೀಸ್ ಠಾಣೆ, ಉರ್ವ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಕಂಕನಾಡಿ ನಗರ ಪೊಲೀಸ್ ಠಾಣೆ ಯಲ್ಲಿ ಸುಮಾರು 4 ವರ್ಷ ಗಳಿಂದ ಪೋಲಿಸ್ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತ್ ಕುಮಾರ್ ಅವರನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಸೋಮವಾರ ಸಂಜೆ ನಿಧನ ಹೊಂದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *