Connect with us

    LATEST NEWS

    ಕೋಟಿ ಚೆನ್ನಯ್ಯ ತಾಯಿಗೆ ಅವಮಾನ ಪ್ರಕರಣ ಪೋಲಿಸರಿಗೆ ಮೊದಲೇ ಗೊತ್ತಿತ್ತೇ ?

    ಪುತ್ತೂರು, ಸೆಪ್ಟೆಂಬರ್ 10 : ಕೋಟಿ ಚೆನ್ನಯ್ಯ ತಾಯಿ ದೇಯಿಬೈದೆದಿ ವಿಗ್ರಹಕ್ಕೆ ಯುವಕನೊಬ್ಬ ಅವಮಾನ ಮಾಡಿ ಆ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ವಿಷಯ ಮತ್ತು ಆರೋಪಿ ಬಗ್ಗೆ ಪೋಲಿಸರಿಗೆ ಗೊತ್ತಿತ್ತೇ ? ಹೌದು ಎನ್ನುತ್ತವೆ ಪೋಲಿಸ್ ಮೂಲಗಳು. ಈಶ್ವರಮಂಗಲದ ನಿವಾಸಿ ಹನೀಫ್ ಎನ್ನುವ ಯುವಕ ಅರಣ್ಯ ಇಲಾಖೆಯು ನಿರ್ಮಿಸಿರುವ ಔಷಧೀಯ ವನದಲ್ಲಿ ನಿರ್ಮಿಸಿರುವ ದೇಯಿ ಬೈದೆದಿಯ ಪುತ್ಥಳಿಯ ಪಕ್ಕದಲ್ಲಿ ಕೂತು ಪುತ್ಥಳಿಯ ಎದೆಯನ್ನು ಮುಟ್ಟುವ ಅನಾಗರಿಕ ವರ್ತನೆಯನ್ನು ತೋರಿದ್ದಾನೆ.

    ಈ ಚಿತ್ರವನ್ನು ಸಾಮಾಜಿಕ ಜಾಲತಾಣಗಳಳ್ಲಿ ಹರಿಬಿಟ್ಟ ವಿಷಯ ಪುತ್ತೂರು ಗ್ರಾಮಾಂತರ ಪೋಲಿಸರಿಗೆ ನಾಲ್ಕು ದಿನಗಳ ಹಿಂದೆಯೇ ಗೊತ್ತಿತ್ತು. ಈ ವಿಷಯ ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಯ ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಖಾದರ್ ಅವರಿಗೆ ಗೊತ್ತಿತ್ತು. ಆದರೆ ಇಷ್ಟು ಗಂಭೀರ ವಿಚಾರವನ್ನು ಅವರು ಪರಿಗಣನೆಗೆ ತೆಗೆದುಕೊಳ್ಳದೆ ಉಡಾಫೆಯಿಂದ ವರ್ತಿಸಿದ್ದಾರೆ ಎಂದು ತಿಳಿದು ಬಂದಿದೆ. ಡ್ರೈವರ್ ವೃತ್ತಿಯನ್ನು ಮಾಡುತ್ತಿರುವ ಹನೀಫ್ ಬಗ್ಗೆ ಎಸ್ ಐ ಖಾದರ್ ಗೆ ಗೊತ್ತಿದ್ದರೂ ಹನೀಫ್ ನನ್ನು ಯಾಕೆ ಬಂಧಿಸಿಲ್ಲ ಎನ್ನುವುದು ಹಲವಾರು ಸಂಶಯಗಳಿಗೆ ಕಾರಣವಾಗಿದೆ.

    ಘಟನೆಯ ವಿವರ:

    ತುಳುನಾಡಿನ ಕಾರ್ಣಿಕ ಪುರುಷರು ಹಾಗೂ ವೀರ ಪುರುಷರಾದ ಕೋಟಿ-ಚೆನ್ನಯ್ಯ ರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೈಯಿ ಬೈದೆದಿಗೆ ಅವಮಾನ ಮಾಡಿದ ಘಟನೆ ವರದಿಯಾಗಿದೆ. ಇಲ್ಲಿನ ಔಷಧೀಯ ವನದಲ್ಲಿ ಯುವಕನೋರ್ವ ಅನಾಗರಿಕನಂತೆ ವರ್ತಿಸಿದ್ದು ಮಾತ್ರವಲ್ಲ ಆ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾನೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

    ಈಶ್ವರಮಂಗಲದ ನಿವಾಸಿ ಹನೀಫ್ ಎನ್ನುವ ಯುವಕ ಅರಣ್ಯ ಇಲಾಖೆಯು ನಿರ್ಮಿಸಿರುವ ಔಷಧೀಯ ವನದಲ್ಲಿ ನಿರ್ಮಿಸಿರುವ ದೇಯಿ ಬೈದೆದಿಯ ಪುತ್ಥಳಿಯ ಪಕ್ಕದಲ್ಲಿ ಕೂತು ಪುತ್ಥಳಿಯ ಎದೆಯನ್ನು ಮುಟ್ಟುವ ಅನಾಗರಿಕ ವರ್ತನೆಯನ್ನು ತೋರಿದ್ದಾನೆ ಹಾಗೂ ಆ ಚಿತ್ರವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ.

    ಕೋಟಿ-ಚೆನ್ನಯ್ಯರ ಜನ್ಮಸ್ಥಳವಾದ ಪಡುಮಲೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸುಮಾರು 5 ಕೋಟಿ ರೂಪಾಯಿಗಳನ್ನು 4 ವರ್ಷಗಳ ಹಿಂದೆಯೇ ಬಿಡುಗಡೆ ಮಾಡಿದೆ. ಇದರ ಜೊತೆಗೆ ಅರಣ್ಯ ಇಲಾಖೆಯ ತನ್ನ ಸ್ವ ಇಚ್ಛೆಯಿಂದ ಪಡುಮಲೆಯಲ್ಲಿ ದೇಯಿ ಬೈದೆದಿ ಔಷಧೀಯ ವನಗಳ ಪಾರ್ಕ್ ನ್ನು ನಿರ್ಮಾಣ ಮಾಡಿದೆ.

    ದೇಯಿಬೈದೆದಿ ಆಗಿನ ಕಾಲದ ಪ್ರಸಿದ್ಧ ನಾಟಿ ವೈದ್ಯೆಯಾಗಿದ್ದ ಹಿನ್ನಲೆಯಲ್ಲಿ ಈ ಪಾರ್ಕನ್ನು ಪಡುಮಲೆಯಲ್ಲಿ ಮಾಡಲಾಗಿದೆ. ಆದರೆ ಸಮರ್ಪಕವಾದ ನಿರ್ವಹಣೆ ಹಾಗೂ ಸೆಕ್ಯುರಿಟಿ ವ್ಯವಸ್ಥೆಯಿಲ್ಲದ ಕಾರಣ ಹನೀಫ್ ನಂತಹ ಕಿಡಿಗೇಡಿಗಳು ಈ ಪಾರ್ಕನ್ನು ತಮ್ಮ ಕುಚೇಷ್ಟೆಗಳ ತಾಣವನ್ನಾಗಿ ಮಾಡುತ್ತಿದ್ದಾರೆ.

    ವ್ಯಾಪಕ ಖಂಡನೆ:

    ಹನೀಫ್ ತೆಗೆಸಿಕೊಂಡಿರುವ ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹನೀಫ್ ವಿರುದ್ದ ಜಾತಿ ಧರ್ಮ ಬಿಟ್ಟು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಮುಖವಾಗಿ ಬಿಲ್ಲವ ಸಂಘಟನೆಗಳು ಈ ದುಷ್ಕೃತ್ಯವನ್ನು ತೀವೃವಾಗಿ ಖಂಡಿಸಿದ್ದು ಈತನ ವಿರುದ್ಧ ಕ್ರಮ ಜರುಗಿಸಲು ಆಗ್ರಹಿಸಿವೆ.

    Share Information
    Advertisement
    Click to comment

    You must be logged in to post a comment Login

    Leave a Reply