LATEST NEWS
ಪೊಲೀಸರ ಮಿಡ್ ನೈಟ್ ಆಪರೇಶನ್ – ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ವಿಚಾರಣೆ

ಮಂಗಳೂರು ಜೂನ್ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಪ್ರಮುಖರ ಮನೆಗೆ ಪೊಲೀಸರು ಮಧ್ಯರಾತ್ರಿ ಭೇಟಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋದ ವಿಚಾರಣೆ ಆರಂಭಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದುತ್ವವಾದಿ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸರು ವಿನಾಕಾರಣ ಮಧ್ಯ ರಾತ್ರಿ ಬಳಿಕ ಮನೆಗೆ ತೆರಳಿ ಕಿರುಕುಳ ನೀಡಿದ್ದಾರೆ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದು, ಆಯೋಗದ ತಂಡವು ಈ ಬಗ್ಗೆ ವಿಚಾರಣೆ ಆರಂಭಿಸಿದೆ.

ಭರತ್ ಶೆಟ್ಟಿ ಅವರನ್ನು ಮಂಗಳವಾರ ಭೇಟಿಯಾದ ಆಯೋಗದ ತಂಡದವರು ಈ ದೂರಿನ ಬಗ್ಗೆ ಹೆಚ್ಚುವರಿ ಮಾಹಿತಿ ಪಡೆದರು. ಸಮಾಜ ಸೇವಾ ಕಾರ್ಯದಲ್ಲಿ ತೊಡಗಿದ್ದವರಿಗೆ ಹಾಗೂ ಅವರ ಕುಟುಂಬಸ್ಥರಿಗೆ ಪೊಲೀಸರು ಮಾನಸಿಕವಾಗಿ ಕಿರುಕುಳ ನೀಡಿದ ಕುರಿತು ಶಾಸಕರು ವಿವರ ನೀಡಿದರು ಎಂದು ಗೊತ್ತಾಗಿದೆ. ಆಯೋಗದ ತಂಡವು ಇನ್ನಷ್ಟು ಮಂದಿಯನ್ನು ಭೇಟಿಯಾಗಿ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.