Connect with us

    DAKSHINA KANNADA

    ಪತ್ನಿಯನ್ನು ಕೊಂದು ಗೋಣಿಚಿಲದಲ್ಲಿಟ್ಟು ಪರಾರಿಯಾಗಿದ್ದ ಆರೋಪಿ ಅರೆಸ್ಟ್

    ಸುಳ್ಯ ನವೆಂಬರ್ 26: ಪತ್ನಿಯನ್ನು ಕೊಲೆಗೈದು ಗೋಣಿ ಚೀಲದಲ್ಲಿ ತುಂಬಿಸಿಟ್ಟು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.


    ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ಇಮ್ರಾನ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳದ ಪೊಲೀಸರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಿ ಸುಳ್ಯ ಪೊಲೀಸರು ಕರೆತಂದಿದ್ದಾರೆ.

    ಆರೋಪಿ ಸುಳ್ಯದ ಬೀರಮಂಗಳದ ಮನೆಯೊಂದರಲ್ಲಿ ಹೆಂಡತಿ ಜೊತೆ ಕಳೆದ ಏಳು ತಿಂಗಳಿಂದ ವಾಸವಾಗಿದ್ದ. ಪತ್ನಿಯನ್ನು ಕೊಂದು ಆಕೆಯನ್ನು ಗೋಣಿ ಚೀಲದಲ್ಲಿ ತುಂಬಿಟ್ಟು ಪರಾರಿಯಾಗಿದ್ದ, ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಬಂದು ಬಾಡಿಗೆ ಮನೆಯ ಬಾಗಿಲು ಒಡೆದು ಒಳ ಹೋಗಿ ನೋಡಿದಾಗ ಗೋಣಿಚೀಲದಲ್ಲಿ ಆತನ ಪತ್ನಿಯ ಶವ ಪತ್ತೆಯಾಗಿತ್ತು. ಪತಿಯೇ ಆಕೆಯನ್ನು ಕೊಲೆಗೈದು ಪರಾರಿಯಾಗಿರುವ ಶಂಕೆಯ ಮೇರೆಗೆ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದರು. ಕೊನೆಗೂ ಪಶ್ಚಿಮ ಬಂಗಳಾದಲ್ಲಿ ಸಿಕ್ಕಿ ಬಿದ್ದಿದ್ದಾನೆ.

    Share Information
    Advertisement
    Click to comment

    You must be logged in to post a comment Login

    Leave a Reply