DAKSHINA KANNADA
ಬನ್ನೂರು ಕರ್ಮಲ ಬಳಿ ವೈಶಾವಾಟಿಕೆ ಆರೋಪ – ಮಹಿಳೆಯರನ್ನು ವಿಚಾರಣೆಗೆ ಕರೆದೊಯ್ದ ಪೊಲೀಸರು
ಪುತ್ತೂರು ಅಗಸ್ಟ್ 29: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೈಶಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ವಿಚಾರಣೆಗೆ ಕರೆದೊಯ್ದ ಘಟನೆ ನಡೆದಿದೆ.
ಬನ್ನೂರು ಕರ್ಮಲ ಪೊಲೀಸ್ ವಸತಿಗೃಹ ರಸ್ತೆಯ ಬಲಮುರಿ ವಿದ್ಯಾಗಣಪತಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ ವೈಶಾವಾಟಿಕೆ ನಡೆಯುತ್ತಿದೆ ಎಂದು ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಪೊಲೀಸರು ಮನೆಗೆ ಆಗಮಿಸಿದರು. ಈ ವೇಳೆ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭ ಓರ್ವ ಮೈಸೂರು ಮೂಲದ ಯುವತಿ ಮತ್ತು ಮಹಿಳೆ ಇದ್ದು ಅವರನ್ನು ಪೊಲೀಸರು ಆಟೋ ರಿಕ್ಷಾವೊಂದರಲ್ಲಿ ಠಾಣೆಗೆ ವಿಚಾರಣೆಗೆ ಕರೆದೊಯ್ದಿದ್ದಾರೆ. ಮೈಸೂರು ಮೂಲದ ಯುವತಿ ತನ್ನ ಸ್ನೇಹಿತೆ ಮನೆಗೆ ಬಂದಿರುವುದಾಗಿ ತಿಳಿಸಿರುವುದಾಗಿ ತಿಳಿದು ಬಂದಿದೆ.
ಆದರೆ ಮನೆಯಲ್ಲಿ ವೈಶಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪೊಲೀಸರು ಬರುವಾಗ ತಡವಾಗಿದ್ದಲ್ಲದೆ ಪೊಲೀಸರು ಬರುವ ಮಾಹಿತಿ ಅರಿತು ಮನೆಯಲ್ಲಿದ್ದ ಯುವಕರು ಕಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login