Connect with us

    BANTWAL

    ಬಂಟ್ವಾಳ ದಲ್ಲಿ ಕೆಂಪು ಕಲ್ಲು ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ, ಸೊತ್ತುಗಳನ್ನು ಬಿಟ್ಟು ಆರೋಪಿಗಳು ಪರಾರಿ..!

    ಬಂಟ್ವಾಳ: ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಬಂಟ್ವಾಳ ಮಂಚಿಯ ಕೆಂಪು ಕಲ್ಲು ಗಣಿಗಾರಿಕೆ ಮೇಲೆ ಸೆನ್ ಪೊಲೀಸರು ದಾಳಿ ನಡೆಸಿದ್ದಾರೆ.


    ಪೋಲೀಸರು ದಾಳಿ ನಡೆಸಿದ ವೇಳೆ ಆರೋಪಿಗಳು ಸೊತ್ತುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.
    ಸೆನ್ ಅಪರಾಧ ಪೋಲೀಸ್ ಠಾಣಾ ಪೋಲೀಸ್ ಉಪನಿರೀಕ್ಷಕ ಮಂಜುನಾಥ ಟಿ.ಅವರು ಕಚೇರಿ ಕಾರ್ಯದ ನಿಮಿತ್ತ ಮಂಚಿ ರಸ್ತೆಯಾಗಿ ಹೋಗುತ್ತಿದ್ದ ವೇಳೆ ಮಂಚಿ ಮುಡಿಪು ರಸ್ತೆಯ ಕಂಡತಟ್ಟು ಗುಡ್ಡ ತಲುಪಿದಾಗ ಅಲ್ಲಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುವುದು ಕಂಡು ಬಂದಿದೆ.
    ಗಣಿಗಾರಿಕೆಯನ್ನು ನೋಡಿ ದಾಳಿ ನಡೆಸಿದಾಗ ಆರೋಪಿಗಳು ಕೆಂಪು ಕಲ್ಲು ಗಣಿಗಾರಿಕೆಗೆ ಬಳಸುತ್ತಿರುವ ಯಂತ್ರವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.
    ಈ ಬಗ್ಗೆ ಅವರು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ಮಾಹಿತಿ ನೀಡಿದ್ದು, ಪರವಾನಿಗೆ ಇಲ್ಲದೆ ಅಕ್ರಮವಾಗಿ ಗಣಿಗಾರಿಕೆ ಮಾಡಲು ಬಳಸಿದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಆರೋಪಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply