LATEST NEWS
ದೂರು ನೀಡಲು ಹೋದ ಅತ್ಯಾಚಾರ ಸಂತ್ರಸ್ಥೆ ಮೇಲೆ ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ
ಉತ್ತರಪ್ರದೇಶ ಮೇ 04: ಅತ್ಯಾಚಾರ ಪ್ರಕರಣ ದಾಖಲಿಸಲು ಹೋದ ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸರೇ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಲಿತಪುರದಲ್ಲಿ ನಡೆದಿದೆ.
ಆರೋಪಿ ಠಾಣಾಧಿಕಾರಿ ತಿಲಕ್ಧಾರಿ ಸರೋಜ್ನನ್ನು ಅಮಾನತುಗೊಳಿಸಲಾಗಿದೆ. ಆತನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಆರೋಪಿ ಪರಾರಿಯಾಗಿದ್ದಾನೆ. ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸಂತ್ರಸ್ತೆ ತನ್ನ ಸಂಬಂಧಿಕರೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದಳು. ಆದರೆ ಪೊಲೀಸ್ ಅಧಿಕಾರಿಯೊಬ್ಬ, ಪ್ರಕರಣ ದಾಖಲಿಸಲು ಬಂದ ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
You must be logged in to post a comment Login