Connect with us

FILM

ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕೃಷ್ಣ ದೇವರ ದರ್ಶನ ಪಡೆದ ನಟಿ ಪೂಜಾಗಾಂಧಿ

ಉಡುಪಿ ಡಿಸೆಂಬರ್ 24: ಮುಂಗಾರುಮಳೆ ಖ್ಯಾತಿಯ ನಟಿ ಪೂಜಾಗಾಂಧಿ ತಮ್ಮ ಪತಿ ವಿಜಯ್ ಘೋರ್ಪಡೆಯೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆಸಲ್ಲಿಸಿದರು.


ಮದುವೆ ಆದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪೂಜಾ ಗಾಂಧಿ ದಂಪತಿ, ಕನಕ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದ್ದಾರೆ. ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿದ್ದು, ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ ಮಾಡಿದ್ದಾರೆ. ಶ್ರೀಕೃಷ್ಣಮಠ ಮತ್ತು ಕಾಣಿಯೂರು ಮಠ ನವ ದಂಪತಿಯನ್ನು ಗೌರವಿಸಿದೆ.


ನವೆಂಬರ್ 29ರಂದು ಉದ್ಯಮಿ ವಿಜಯ್ ಘೋರ್ಪಡೆ ಜೊತೆ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂತ್ರ- ಮಾಂಗಲ್ಯ ಪದ್ಧತಿಯಲ್ಲಿ ಸರಳವಾಗಿ ಪೂಜಾ ಮದುವೆಯಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *