Connect with us

    MANGALORE

    ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ ನಿಧನ

    ಮಂಗಳೂರು ಡಿಸೆಂಬರ್ 16: ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ (81) ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.


    1969ರಲ್ಲಿ ಭಾರತೀಯ ನೌಕಾ ಪಡೆಯಿಂದ ನಿವೃತ್ತಿ ಪಡೆದು, ಮುಂಬೈ ರಾಮಕೃಷ್ಣ ಮಠಕ್ಕೆ ಬ್ರಹ್ಮಚಾರಿಯಾಗಿ ಸೇರಿದ್ದ ಅವರು, ರಾಮಕೃಷ್ಣ ಮಹಾಸಂಘದ 10ನೇ ಅಧ್ಯಕ್ಷರಾಗಿದ್ದ ಸ್ವಾಮಿ ವಿರೇಶ್ವರಾನಂದಜಿ ಅವರಿಂದ ಮಂತ್ರದೀಕ್ಷೆ ಪಡೆದರು. 1978ರಲ್ಲಿ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಿ ಮುಂಬೈ, ಅರುಣಾಚಲ ಪ್ರದೇಶ, ಮಾರಿಷಸ್ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದರು. 1980ರಲ್ಲಿ ಮಂಗಳೂರಿಗೆ ಬಂದಿದ್ದ ಸ್ವಾಮಿಜಿ, 1998ರಲ್ಲಿ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾಗಿ ನಿಯುಕ್ತರಾದರು. 2010ರಲ್ಲಿ ಅಧ್ಯಕ್ಷ ಸ್ಥಾನವನ್ನು ಸ್ವಾಮಿ ಜಿತಕಾಮಾನಂಜಿ ಅವರಿಗೆ ಹಸ್ತಾಂತರಿಸಿದ್ದರು. ಮಂಗಳೂರು ರಾಮಕೃಷ್ಣ ಮಠದಲ್ಲಿ ಗುರುವಾರ ಸಂಜೆ ಅಂತ್ಯಕ್ರಿಯೆ ನಡೆಸಲಾಯಿತು.

    Share Information
    Advertisement
    Click to comment

    You must be logged in to post a comment Login

    Leave a Reply