DAKSHINA KANNADA
ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮುಳ್ಳು ಹಂದಿ ದಾಳಿ
ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದ ಘಟನೆ
ಪುತ್ತೂರು ಜೂನ್ 9: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಪರಿಣಾಮ ಗಭೀರ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಕರೈ ನಿವಾಸಿ ಶಫೀಕ್ ದಾಳಿಗೊಳಗಾದ ಯುವಕನಾಗಿದ್ದು, ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನ ಸ್ನೇಹಿತನ ಜತೆ ಸಾಲೆತ್ತೂರಿನಿಂದ ಕರೈಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಅವರನ್ನು ವಿಟ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
You must be logged in to post a comment Login