LATEST NEWS
ಮಂಗಳೂರು – ‘ಬಿಜೆಪಿಯೇ ಭರವಸೆ’ ಎಂಬ ಪೋಸ್ಟರ್ ಮೇಲೆಯೇ ‘ಸಾಕಪ್ಪಾ ಸಾಕು ಕಿವಿ ಮೇಲೆ ಹೂವ’ ಎಂಬ ಪೋಸ್ಟರ್
ಮಂಗಳೂರು ಫೆಬ್ರವರಿ 19: ಬಿಜೆಪಿ ವಿರುದ್ದ ಕಾಂಗ್ರೇಸ್ ನಡೆಸುತ್ತಿರುವ ಸಾಕಪ್ಪ ಸಾಕು ಕಿವಿ ಮೇಲೆ ಹೂವು ಎಂಬ ಅಭಿಯಾನ ಆರಂಭಿಸಿದ್ದು ಎಲ್ಲೆಡೆ ಚರ್ಚೆ ಹುಟ್ಟು ಹಾಕಿದೆ. ಇದೀಗ ಕರಾವಳಿಯಲ್ಲೂ ಕಾಂಗ್ರೆಸ್ ನ ಈ ಅಭಿಯಾನ ಭಾರಿ ಸದ್ದು ಮಾಡುತ್ತಿದೆ. ಮಂಗಳೂರು ನಗರದಲ್ಲೂ ‘ಬಿಜೆಪಿಯೇ ಭರವಸೆ’ ಎಂಬ ಪೋಸ್ಟರ್ ಮೇಲೆಯೇ ‘ಸಾಕಪ್ಪಾ ಸಾಕು ಕಿವಿ ಮೇಲೆ ಹೂವ’ ಎಂಬ ಪೋಸ್ಟರ್ ಹಾಕಲಾಗಿದೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಿವಿಯ ಮೇಲೆ ಹೂವು ಇಟ್ಟುಕೊಂಡು ಬಂದು ರಾಜ್ಯ ಬಜೆಟ್ ಬಗ್ಗೆ ವ್ಯಂಗ್ಯವಾಡಿದ್ದರು.
ಇದರ ಬೆನ್ನಿಗೆ ಇದೀಗ ಬಿಜೆಪಿ ತನ್ನ ಪ್ರಚಾರಕ್ಕೆ ಮಾಡಿರುವ ಬ್ಯಾನರ್ ಮೇಲೆ ಕಿವಿ ಮೇಲೆ ಹೂವು ಇಟ್ಟುಕೊಂಡಿರುವ ಪೋಸ್ಟರ್ ಬಂದಿದೆ. ಬಿಜೆಪಿ ಹಾಕಿರುವ ಬ್ಯಾನರ್ ಮೇಲೆಯೇ ಮತ್ತೊಂದು ಪೋಸ್ಟರ್ ಅಂಟಿಸಲಾಗಿದೆ. ಇದು ಕಾಂಗ್ರೆಸ್-ಬಿಜೆಪಿ ಪೋಸ್ಟರ್ ವಾರ್ಗೆ ನಾಂದಿಯಾಗಿದೆ.
‘ಬಿಜೆಪಿಯೇ ಭರವಸೆ’ ಎಂಬ ಪೋಸ್ಟರ್ ಮೇಲೆ ಬುರುಡೆ ಭರವಸೆ ಸಾಕು, ಕಿವಿ ಮೇಲೆ ಹೂವ’, ಸಾಕಪ್ಪಾ ಸಾಕು ಕಿವಿ ಮೇಲೆ ಹೂವ’ ಎಂಬ ಪೋಸ್ಟರ್ ಅಂಟಿಸಲಾಗಿದೆ. ನಗರದ ನಂತೂರು, ಬಿಕರ್ನಕಟ್ಟೆ, ಕೋರ್ಟ್ ರಸ್ತೆ ಸೇರಿದಂತೆ ಮೊದಲಾದೆಡೆ ಬ್ಯಾನರ್ ಮೇಲೆ ಪೋಸ್ಟರ್ ಅಂಟಿಸಿರುವುದ ಕಂಡು ಬಂದಿದೆ
You must be logged in to post a comment Login