Connect with us

    LATEST NEWS

    ಗೌರಿ ಮಾನಸಿಕತೆಯಿಂದ ಪ್ರಕಾಶ್ ರೈ ಇನ್ನೂ ಹೊರ ಬಂದಿಲ್ಲ- ಕೋಟ ಶ್ರೀನಿವಾಸ ಪೂಜಾರಿ

    ಗೌರಿ ಮಾನಸಿಕತೆಯಿಂದ ಪ್ರಕಾಶ್ ರೈ ಇನ್ನೂ ಹೊರ ಬಂದಿಲ್ಲ- ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ ನವೆಂಬರ್ 5: ನಟ ಪ್ರಕಾಶ್ ರೈ ಅವರು ಇನ್ನು ಗೌರಿಯ ಮಾನಸಿಕತೆಯಿಂದ ಹೊರ ಬಂದಿಲ್ಲ. ಅಯ್ಯಪ್ಪ ದೇವರೆ ಅಲ್ಲ ಎಂದು ಹೇಳಿಕೆ ನೀಡಿದ್ದ ನಟ ಪ್ರಕಾಶ್ ರೈ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.

    ಅಯ್ಯಪ್ಪ ದೇವರೇ ಅಲ್ಲ ಎಂದು ಹೇಳಿಕೆ ನೀಡಿದ್ದ ನಟ ಪ್ರಕಾಶ ರೈ ಅವರು ಗೌರಿಯ ಮಾನಸಿಕತೆಯಿಂದ ಇನ್ನೂ ಹೊರಬಂದಿಲ್ಲ, ಗೌರಿ ಲಂಕೇಶ್ ಹತ್ಯೆ ನಮಗೆಲ್ಲಾ ನೋವು ತಂದಿದೆ. ಯಾವ ಹಿಂಸೆಯನ್ನೂ ಸಹಿಸಲು ನಮಗೆ ಸಾಧ್ಯವಿಲ್ಲ, ಆದರೆ ಗೌರಿ ಲಂಕೇಶ್ ಅವರು ಹಿಂದೂ ಧರ್ಮ ಧರ್ಮವೇ ಅಲ್ಲ ಎಂದಿದ್ದರು. ಅಲ್ಲದೆ ಹಿಂದೂ ದೇವರು ದೇವರೇ ಅಲ್ಲ ಎಂದು ಹೇಳಿದ್ದರು. ಈಗ ಅದೇ ಆ ಮಾನಸಿಕತೆಯಿಂದ ಪ್ರಕಾಶ್ ರೈ ಅಯ್ಯಪ್ಪ ದೇವರೇ ಅಲ್ಲ ಎಂದು ಹೇಳಿಕೆ ನೀಡಿದ್ದಾರೆ. ಅವರು ಆ ಮಾನಸಿಕತೆಯಿಂದ ಹೊರ ಬಂದಿಲ್ಲ ಅನ್ನೋದೇ ದುಖ ಎಂದು ಹೇಳಿದರು. ಬುದ್ದಿಜೀವಿಗಳು, ನಗರ ನಕ್ಸಲರ ಮಾತಿಗೆ ಅವರೇ ಸ್ಪಷ್ಟನೆ ಕೊಡಬೇಕು ಎಂದರು.

    ಇತರ ಧರ್ಮಗಳ ವಿಚಾರವನ್ನು ಆಯಾ ಧರ್ಮಗಳು ನಿರ್ಧರಿಸುತ್ತೆ ಆದರೆ ಹಿಂದೂ ಧರ್ಮದ ವಿಚಾರದಲ್ಲಿ ನ್ಯಾಯಾಲಯ, ಸರ್ಕಾರ ಹಸ್ತಕ್ಷೇಪ ಮಾಡುತ್ತಿದ್ದು, ಶಬರಿಮಲೆ ವಿಚಾರದಲ್ಲಿ ಧಾರ್ಮಿಕ ನಂಬಿಕೆಗೆ ಬೆಲೆ ಕೊಡಬೇಕು ಎಂದು ಅಭಿಪ್ರಾಯಪಟ್ಟರು.

    ನ್ಯಾಯಾಲಯ ಕ್ಕೆ ಮೇಲ್ಮನವಿ ಸಲ್ಲಿಸಿದ ನಂತರವೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವರ್ತನೆ ಸರಿಯಾಗಿಲ್ಲ ಎಂದು ಹೇಳಿದ ಅವರು ನಂಬಿಕೆಯ ಮೇಲಿನ ಬಲಾತ್ಕಾರ, ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply