Connect with us

    FILM

    ಕೆಜಿಎಫ್ ಗಾಯಕಿ ಜೊತೆ ಸಿಂಗಾರ ಸಿರಿಯೇ ಖ್ಯಾತಿ ಸಾಹಿತಿ ಪ್ರಮೋದ್ ಮರವಂತೆ ಎಂಗೇಜ್ಮೆಂಟ್

    ಕುಂದಾಪುರ ಸೆಪ್ಟೆಂಬರ್ 11: ಸಿಂಗಾರ ಸಿರಿಯೇ ಹಾಡಿನ ಮೂಲಕ ಖ್ಯಾತಿ ಪಡೆದಿದ್ದ ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಶುಭಸುದ್ದಿ ನೀಡಿದ್ದು, ‘ಕೆಜಿಎಫ್ 2’ ಚಿತ್ರದ ಸಿಂಗರ್ ಸುಚೇತ ಬಸ್ರೂರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.


    ನಿಶ್ಚಿತಾರ್ಥದ ಸಂಭ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ‘ರಾಗಕ್ಕೆ ಪದ ಸೇರಿದೆ ಬದುಕೊಂದು ಹಾಡಾಗಿದೆ’ ಎಂದು ಸಾಲುಗಳನ್ನು ಬರೆದು ಭಾವಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

    ಪ್ರಮೋದ್ ಭಾವಿ ಪತ್ನಿಯ ಹೆಸರು ಸುಚೇತ ಬಸ್ರೂರು, ಕೆಜಿಎಫ್ 2 ಚಿತ್ರದಲ್ಲಿ ‘ಗಗನ ನೀ ಭುವನ ನೀ’ ಎಂಬ ಹಾಡನ್ನು ಸೊಗಸಾಗಿ ಹಾಡುವ ಮೂಲಕ ಸದ್ದು ಮಾಡಿದ್ದರು. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸೊಸೆಯಾಗಿದ್ದಾರೆ. ಅವರ ಅಕ್ಕನ ಮಗಳು ಸುಚೇತ ಜೊತೆ ಪ್ರಮೋದ್ ಉಂಗುರದ ಮುದ್ರೆ ಒತ್ತಿದ್ದಾರೆ. ಸದ್ಯದಲ್ಲೇ ಮದುವೆ ಕುರಿತು ಅಪ್‌ಡೇಟ್‌ ಹಂಚಿಕೊಳ್ಳಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply