Connect with us

    LATEST NEWS

    ಜಿಲ್ಲಾಡಳಿತ ನಿರ್ಬಂಧದ ಒಂದು ದಿನ ಮೊದಲೇ ಗಂಗೊಳ್ಳಿಯಲ್ಲಿ ಪ್ರಮೋದ್ ಮುತಾಲಿಕ್….!!

    ಉಡುಪಿ ಎಪ್ರಿಲ್ 15 : ಕಾನೂನು ಸುವ್ಯವಸ್ಥೆ ಹಿನ್ನಲೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಉಡುಪಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಪ್ರವೇಶಕ್ಕೆ ಇಂದಿನಿಂದ ನಿರ್ಬಂಧ ಹೇರಿದೆ. ಈ ನಡುವೆ ಪ್ರಮೋದ್ ಮುತಾಲಿಕ್ ನಿರ್ಬಂಧದ ದಿನಕ್ಕಿಂದ ಒಂದು ದಿನ ಮುಂಚೆಯೇ ಗಂಗೊಳ್ಳಿಯಲ್ಲಿ ಪ್ರತ್ಯಕ್ಷರಾಗಿದ್ದು, ಇದೀಗ ಪೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    ಹಿಂದೂ ಜಾಗರಣ ವೇದಿಕೆ ಕುಂದಾಪುರ ತಾಲೂಕು ಗಂಗೊಳ್ಳಿಯ ಬೀರೇಶ್ವರ ದೇವಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರಮೋದ್ ಮುತಾಲಿಕ್ ಆಗಮಿಸಬೇಕಿತ್ತು. ಆದರೆ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲು ಉಡುಪಿ ಜಿಲ್ಲಾಡಳಿತ ಪ್ರಮೋದ್ ಮುತಾಲಿಕ್ ಗೆ ಎಪ್ರಿಲ್ 15 ರಿಂದ ಉಡುಪಿಗೆ ನಿರ್ಬಂಧ ಹೇರಿತ್ತು. ಆದರೆ ಜಿಲ್ಲಾಡಳಿತ ನಿರ್ಬಂಧ ಹಿನ್ನೆಲೆ ಒಂದು ದಿನ ಮೊದಲೇ ಗಂಗೊಳ್ಳಿಯಲ್ಲಿ ಪ್ರಮೋದ್ ಮುತಾಲಿ ಪ್ರತ್ಯಕ್ಷರಾಗಿದ್ದಾರೆ.ನಿನ್ನೆ ರಾತ್ರಿಯೇ ಗಂಗೊಳ್ಳಿಗೆ ಪ್ರಮೋದ್ ಮುತಾಲಿಕ್ ಆಗಮಿಸಿದ್ದಾರೆ. ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

     

    ಈ ನಡುವೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ ಪಿ ವಿಷ್ಣುವರ್ಧನ್ ಅವರು ಮುತಾಲಿಕ್ ಆರೋಗ್ಯ ತಪಾಸಣೆಗೆ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಈ ಸಂಬಂಧ ಮೊದಲೇ ಅವರು ಆಸ್ಪತ್ರೆಯಿಂದ ದಿನ ನಿಗದಿ ಮಾಡಿದ್ದರು ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply