Connect with us

    DAKSHINA KANNADA

    ಪ್ರವೀಣ್ ನೆಟ್ಟಾರು, ಹರ್ಷ ಕೊಲೆ ಆರೋಪಿಗಳ ಎನ್​ಕೌಂಟರ್​​ಗೆ ಅವಕಾಶ ಇತ್ತು – ಆದರೆ ಬಿಜೆಪಿ ಸರಕಾರ ಮಾಡಿಲ್ಲ – ಪ್ರತಾಪ್ ಸಿಂಹ ಅಸಮಧಾನ

    ಸುಳ್ಯ ಸೆಪ್ಟೆಂಬರ್ 06: ಬಿಜೆಪಿ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅಸಮಧಾನ ಹೊರಹಾಕಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜ್ಯಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದು ತಮ್ಮದೇ ಪಕ್ಷದ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ.


    ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ (VHP) ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ‌ ಆಯೋಜಿಸಿದ್ದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ಹೋಗಿ ಬಾವುಟ, ಕರಪತ್ರ ಹಂಚಿ 2018 ರಲ್ಲಿ ಸರ್ಕಾರವನ್ನು ತಂದಿದ್ದೀರಿ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಯಿತು. ಮರ್ಡರ್ ಮಾಡಿದವರು ಎಲ್ಲಿ ಇದ್ದಾರೆ ಎಂದು ಪೊಲೀಸರಿಗೆ ಗೊತ್ತಿತ್ತು. ಪೊಲೀಸರ ಕೈಯಲ್ಲಿ ಬಂದೂಕು ಇತ್ತು. ಟ್ರಿಗರ್ ಎಳೆಯಲು ಬೆರಳು ಇತ್ತು. ಆದರೆ ಟ್ರಿಗರ್ ಎಳೆಯಬೇಡಿ ಎಂದು ಬಿಜೆಪಿ ಸರಕಾರಕ್ಕೆ ಆರ್ಡರ್ ಮಾಡಿದವರು ಯಾರು? ಪೊಲೀಸ್ ಇಲಾಖೆಯು ರಾಜಕಾರಣಿಗಳು ಎಂಬ ದುಷ್ಟ ವ್ಯವಸ್ಥೆಯಡಿ ಸಿಲುಕಿದೆ ಎಂದು ಆರೋಪಿಸಿದರು.

    ಅಂದು ಬಿಜೆಪಿ ಸರಕಾರ ಆರ್ಡರ್ ಕೊಟ್ಟಿದ್ದರೆ, ದುರುಳರು ಇವತ್ತು ಸತ್ತಿರುತ್ತಿದ್ದರು. ಶಿವಮೊಗ್ಗ ಹರ್ಷನ ಮರ್ಡರ್ ಕೇಸ್‌ನಲ್ಲಿದ್ದ ಆರೋಪಿಗಳು ಒಂದು ಮನೆಯಲ್ಲಿದ್ದರು. ಅವರನ್ನು ಎನ್‌ಕೌಂಟರ್ ಮಾಡಿಸುವುದಕ್ಕೆ ತೊಂದರೆ ಏನಿತ್ತು ಎಂದು ಪ್ರಶ್ನಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply