KARNATAKA
ಮೈಸೂರು – ಪ್ರತಾಪ್ ಸಿಂಹಗೆ ಟಿಕೆಟ್ ಡೌಟ್ – ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಸಾಧ್ಯತೆ…!!
ಮೈಸೂರು ಮಾರ್ಚ್ 12: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಿಂದ ಭಾರೀ ಬದಲಾವಣೆಗಳಾಗುವ ಸಾಧ್ಯತೆ ಇದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಭೆ ನಡೆಸಿದೆ. ಈ ನಡುವೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಗೆ ಈ ಬಾರಿ ಲೋಕಸಭೆ ಚುನಾವಣಗೆ ಟಿಕೆಟ್ ಸಿಗುವುದು ಬಹುತೇಕ ಅನುಮಾನ ಎಂದು ಹೇಳಲಾಗಿದೆ.
ಮೈಸೂರು ಹಾಲಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ನೀಡೋದು ಬಹುತೇಕ ಡೌಟ್ ಆಗಿದೆ. ಇದರ ಮಧ್ಯೆ ಮೈಸೂರು ಮತ್ತು ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಫೈನಲ್ ಆಗಿದೆ ಎಂದು ತಿಳಿದು ಬಂದಿದೆ. ಈ ಹಿಂದೆಯೇ ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ಕೈ ತಪ್ಪಲಿದೆ ಅನ್ನೋ ಮಾತುಗಳು ಕೇಳಿ ಬಂದಿದ್ದವು. ಈಗ ಕೊನೆಗೂ ಮೈಸೂರು ಬಿಜೆಪಿ ಟಿಕೆಟ್ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲಾಗಿರುವುದು ಬಹುತೇಕ ಖಚಿತವಾಗಿದೆ.
ಈ ನಡುವೆ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಫೇಸ್ಬುಕ್ನಲ್ಲಿ ಲೈವ್ನಲ್ಲಿ ಹಲವು ವಿಚಾರಗಳನ್ನು ತಿಳಿಸಿ ಭಾವುಕರಾಗಿದ್ದಾರೆ.
You must be logged in to post a comment Login