Connect with us

KARNATAKA

ನಾನು ಮಾಜಿಯಾದರೂ ಕೆಲಸಕ್ಕಾಗಿ ಕರೆ ಮಾಡಿ – ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ

ಮೈಸೂರು, ಮಾರ್ಚ್​​ 14:ಮೈಸೂರು – ಕೊಡಗು ಸಂಸತ್ ಸ್ಥಾನಕ್ಕೆ ಟಿಕೆಟ್ ವಂಚಿತರಾಗಿರುವ ಸಂಸದ ಪ್ರತಾಪ್ ಸಿಂಹ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಹಾಕಿದ್ದು, ಇದೀಗ ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ‌ ಮಾಡಿ ಎಂದು ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.


ಎರಡು ಬಾರಿ ಮೈಸೂರು-ಕೊಡಗು ಸಂಸದನಾಗಿ ಕೆಲಸ ಮಾಡಿದ್ದ ಸಂಸದ ಪ್ರತಾಪ್ ಸಿಂಹ ಗೆ ಈ ಬಾರಿ ಟಿಕೆಟ್ ಕೈತಪ್ಪಿ ಹೋಗಿದೆ. ಪ್ರತಾಪ್ ಸಿಂಹ ಬದಲಿಗೆ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.
ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *