DAKSHINA KANNADA
ಪ್ರವೀಣ್ ಹತ್ಯೆ ಆರೋಪಿಗಳು ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ…!!
ಪುತ್ತೂರು ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧನವಾಗಿರುವ ಆರೋಪಿಗಳು ಕೆಲಸ ಮಾಡುತ್ತಿದ್ದ ಅಂಗಡಿಗಳಿಗೆ ಹಿಂದೂ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ವರದಿಯಾಗಿದೆ.
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಎಂಬಲ್ಲಿ ಆರೋಪಿ ಶಫೀಕ್ ಬೆಳ್ಳಾರೆ ಕೆಲಸ ಮಾಡುತ್ತಿದ್ದ. ಇದೀಗ ಈತನ ಬಂಧನವಾಗುತ್ತಿದ್ದಂತೆಯೇ ಸಾರ್ವಜನಿಕರು ಅಡಿಕೆ ಅಂಗಡಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕರು ಅಂಗಡಿಗೆ ಮುತ್ತಿಗೆ ಹಾಕುತ್ತಿದ್ದಂತೆಯೇ ಪೊಲೀಸರು ಮಧ್ಯಪ್ರವೇಶ ಮಾಡಿದ್ದಾರೆ. ಈ ವೇಳೆ ಮಾಲೀಕ ಅಂಗಡಿಗೆ ಬೀಗ ಹಾಕಿ ತೆರಳಿದರು.
You must be logged in to post a comment Login