Connect with us

    DAKSHINA KANNADA

    ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸುಳ್ಯ, ಕಡಬ, ಪುತ್ತೂರು ತಾಲೂಕು ಬಂದ್‌

    ಪುತ್ತೂರು ಜುಲೈ 27: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಖಂಡಿಸಿ ಇಂದು ದಕ್ಷಿಣಕನ್ನಡ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಹಿಂದೂ ಸಂಘಟನೆಗಳು ಬಂದ್ ಕರೆ ನೀಡಿದ್ದಾರೆ.


    ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಈ ಹಿನ್ನಲೆ ಮೂರು ತಾಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಲಾಗಿದೆ.

    ಈ ನಡುವೆ ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಮೂರು ತಾಲ್ಲೂಕುಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಬಸ್ ಸೌಕರ್ಯ ಇಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಕಚೇರಿಗಳಿಗೆ ತೆರಳುವವರು ಸಮಸ್ಯೆ ಎದುರಿಸಿದರು. ಪುತ್ತೂರಿನ ವಿವೇಕಾನಂದ‌ ಕಾಲೇಜು ಸೇರಿದಂತೆ ಕೆಲವು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply