Connect with us

    LATEST NEWS

    ಪ್ರವೀಣ್ ಹತ್ಯೆ ಪ್ರಕರಣ – ಇನ್ನಿಬ್ಬರು ಆರೋಪಿಗಳ ಬಂಧನ

    ಮಂಗಳೂರು ಅಗಸ್ಟ್ 02: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಇಬ್ಬರು ಆರೋಪಿಗಳು ಪೊಲೀಸರು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.
    ಬಂಧಿತರನ್ನು ಬೆಳ್ಳಾರೆ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ ( 32) ಮತ್ತು ಹ್ಯಾರಿಸ್ (42) ಎಂದು ಗುರುತಿಸಲಾಗಿದೆ.


    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಫೀಕ್ ಮತ್ತು ಜಾಕೀರ್ ಅವರನ್ನು ವಿಚಾರಣೆ ನಡೆಸಿದಾಗ ಈ ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆ ಈ ಇಬ್ಬರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದು. ಹಂತಕರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಇಲ್ಲಿವರೆಗಿನ ತನಿಖೆ ಆಧಾರಿತವಾಗಿ ತನಿಖಾಧಿಕಾರಿಗಳು ಶಂಕಿತ ಸಂಚುಕೋರರು ಮತ್ತು ದಾಳಿಕೋರರನ್ನು ಗುರುತಿಸಿದ್ದಾರೆ. ಶಂಕಿತರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply