LATEST NEWS
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮೂವರನ್ನು ಬಂಧಿಸಿದ ಎನ್ಐಎ
ಪುತ್ತೂರು, ನವೆಂಬರ್ 05 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾಫಿ ಬಂಧಿತರು.
NIA ಉನ್ನತ ಮೂಲಗಳ ಪ್ರಕಾರ ಇಂದು ಮುಂಜಾನೆ ಉಪ್ಪಿನಂಗಡಿ ಮತ್ತು ಸುಳ್ಯದಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.
You must be logged in to post a comment Login