ಪುತ್ತೂರು, ಜುಲೈ 29: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿಯಾಗಿರುವ ಇನ್ನೂ 3-4 ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಬಂಧಿತ ಝಾಕೀರ್ ಮತ್ತು ಶಫೀಕ್ ಪಿಎಫ್ಐ ಸಂಘಟನೆಯ ಜೊತೆ ನಂಟು ಇರುವ ಬಗ್ಗೆ ಮಾಹಿತಿ ದೊರೆತಿದೆ. ಆದರೆ ಪಿಎಫ್ಐ ಸಂಘಟನೆಗೆ ಅಧಿಕೃತ ಸದಸ್ಯತ್ವ ನೊಂದಣಿ ನಿಯಮದ ವ್ಯವಸ್ಥೆಯಿಲ್ಲ, ಪ್ರವೀಣ್ ಗೆ ಎರಡು ತಿಂಗಳಿಂದ ಬೆದರಿಕೆ ಕರೆ ಬರುತ್ತಿದ್ದ ಬಗ್ಗೆ ಬೆಳ್ಳಾರೆ ಠಾಣೆಗೆ ಮೌಖಿಕ ಮಾಹಿತಿ ನೀಡಿದ್ದಾರೆ.
ಯಾರ ಬಳಿ ಮಾಹಿತಿ ನೀಡಿದ್ದಾರೆ ಎನ್ನುವುದರ ಮಾಹಿತಿ ಪಡೆದುಕೊಳ್ಳಲಾಗುವುದು, ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಪ್ರಕರಣದ ಆರೋಪಿಗಳನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು, ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.