DAKSHINA KANNADA
ಹೆಚ್ ಡಿಕೆ ಶೀಘ್ರ ಗುಣಮುಖರಾಗಲು ಪ್ರಾರ್ಥನೆ
ಹೆಚ್ ಡಿಕೆ ಶೀಘ್ರ ಗುಣಮುಖರಾಗಲು ಪ್ರಾರ್ಥನೆ
ಉಡುಪಿ ಸೆಪ್ಟೆಂಬರ್ 23: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾದ್ಯಕ್ಷ ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಜೆಡಿಎಸ್ ಘಟಕ ವತಿಯಿಂದ ಇಂದು ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಎಚ್ ಡಿ ಕೆ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಲಾಯಿತು.
ಕಾಪುವಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀ ಜನಾರ್ಧನ ದೇವಸ್ಥಾನ, ಪೊಲಿಪು ಸಂಶುದ್ದೀನ್ ವಲಿಯುಲ್ಲಾಹಿ ದರ್ಗಾ ಹಾಗೂ ಶಿರ್ವ ಚರ್ಚ್ ಗಳಿಗೆ ತೆರಳಿದ ಉಡುಪಿ ಜೆಡಿಎಸ್ ಮುಖಂಡರು ವಿಶೇಷ ಪೂಜೆ ಹಾಗು ಪ್ರಾರ್ಥನೆ ಸಲ್ಲಿಸಿದರು. ಕುಮಾರಸ್ವಾಮಿ ಶೀಘ್ರ ಚೇತರಿಕೆ ಕಂಡು ರಾಜ್ಯದ ಜನತೆಗೆ ಇನ್ನಷ್ಟು ಸೇವೆಸಲ್ಲಿಸುವಂತಾಗಲಿ ಎಂದು ಜೆಡಿಎಸ್ ನಾಯಕರು ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೇಶ್, ಮಹಿಳಾ ಘಟಕಾಧ್ಯಕ್ಷೆ ಶಾಲಿನಿ ಶೆಟ್ಟಿ, ಪ್ರದೀಪ್ ಹಾಗೂ ಕಾರ್ಯಕರ್ತರು ಹಾಜರಿದ್ದರು.
ದಕ್ಷಿಣಕನ್ನಡ ಜಿಲ್ಲೆಯಲ್ಲೂ ಪ್ರಾರ್ಥನೆ
ಈ ನಡುವೆ ದಕ್ಷಿಣಕನ್ನಡ ಜಿಲ್ಲಾ ಯುವ ಜನತಾ ದಳ ಮುಖಂಡರು ಹೆಚ್ ಡಿ ಕುಮಾರ ಸ್ವಾಮಿ ಅವರ ಶೀಘ್ರ ಚೇತರಿಕೆಗೆ ದೇವರ ಮೂರೆ ಹೋಗಿದ್ದಾರೆ.
ದಕ್ಷಿಣಕನ್ನಡ ಜಿಲ್ಲಾ ಯುವ ಜನತಾದಳ ಮುಖಂಡರು ಇಂದು ಮಂಗಳೂರು ನಗರದ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೆಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ರುದ್ರಅಭೀಷೇಕ ಸಲ್ಲಿಸಲಾಯಿತು . ನಂತರ ದರ್ಗಾ, ವಿಲಾಗ್ರಿಸ್ ಚರ್ಚ್ ಗಳಿಗೂ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭ ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ , ಜೆಡಿಎಸ್ ಮುಖಂಡರಾದ ಗೋಪಾಲಕೃಷ್ಣ ಅತ್ತಾವರ. ಪೈಜಲ್. ರತ್ನಕರ್ ಸುವರ್ಣ.ನಾಸಿರ್. ಜಿಲ್ಲಾ ಯುವ ಮಹಾ ಪ್ರಧಾನ ಕಾರ್ಯದರ್ಶಿ ಮಧುಸೂದನ ಗೌಡ ಮತ್ತಿತರರು ಉಪಸ್ಥಿತರಿದ್ದರು.
You must be logged in to post a comment Login