DAKSHINA KANNADA
ರಾಜ್ಯದಲ್ಲಿ ಪೂರ್ವ ಮುಂಗಾರು ಹವಾ, ದಕ್ಷಿಣ ಕನ್ನಡ ಸೇರಿ ಕರಾವಳಿ ಸೇರಿ16 ಜಿಲ್ಲೆಗಳಲ್ಲಿ ಇಂದು,ನಾಳೆ ಮಳೆ ಸಾಧ್ಯತೆ..!

ಕರಾವಳಿಯ ಮೂರು ಜಿಲ್ಲೆಗಳು ಸೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು : ಮೂರ್ವ ಮುಂಗಾರು ಹವಾ ರಾಜ್ಯದಲ್ಲಿ ಕಾಣಿಸಿಕೊಂಡಿದ್ದು ಗುರುವಾರ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಕೊಪ್ಪಳದಲ್ಲಿ ಸಿಡಿಲಘಾತಕ್ಕೆ ಓರ್ವ ವ್ಯಕ್ತಿ ಸಾವನ್ನಪ್ಪಿದರೆ, ಕೊಟ್ಟೂರಿನಲ್ಲಿ 5 ಆಕಳುಗಳು ಸಾವನ್ನಪ್ಪಿವೆ. ಚಿಕ್ಕಮಗಳೂರು, ಬೀದರ್, ಹುಬ್ಬಳ್ಳೀ ಧಾರವಾಡಗಳಲ್ಲಿ ಉತ್ತಮ ಮಳೆಯಾಗಿದೆ.

ಕರಾವಳಿಯಲ್ಲೂ ಆಗಾಗ ಮೋಡ ಕವಿದ ವಾತಾವರಣ ಗೋಚರಿಸುತ್ತಿದ್ದು ಜೊತೆಗೆ ಬಿಸಿಲ ಬೇಗೆಯೂ ಹೆಚ್ಚುತ್ತಿದೆ. ಕರಾವಳಿಯ ಮೂರು ಜಿಲ್ಲೆಗಳು ಸೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಇಂದು ಒಂದೆರಡು ಕಡೆ ಚದುರಿದ ಹಗುರ ಮಳೆಯಾಗಬಹುದು. ಈ ಪೈಕಿ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆ ಗುಡುಗು ಮಿಂಚು ಮತ್ತು ಬಿರುಗಾಳಿ ಕಂಡುಬರಬಹುದು ಎಂದು ಹವಾಮಾನ ವರದಿ ಹೇಳಿದೆ.