Connect with us

    LATEST NEWS

    ಅಕ್ಟೋಬರ್ 7ಕ್ಕೆ ಮಂಗಳೂರಿಗೆ ರಾಷ್ಟ್ರಪತಿ

    ಮಂಗಳೂರು ಸೆಪ್ಟೆಂಬರ್ 30: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿಯವರು ಎರಡನೇ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 6ರಿಂದ 9ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅ.7ರಿಂದ 9ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ.


    ಅಕ್ಟೋಬರ್ 7ರಂದು ಚಾಮರಾಜನಗರದಲ್ಲಿ ಆಸ್ಪತ್ರೆ ಉದ್ಘಾಟನೆ ಬಳಿಕ ಮಂಗಳೂರಿಗೆ ಆಗಮಿಸಲಿರುವ ಅವರು ಇಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಂತರ 8ರ ಬೆಳಿಗ್ಗೆ 10.45ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಶೃಂಗೇರಿಗೆ ತೆರಳುವರು. ಪುನಃ ಮಂಗಳೂರಿಗೆ ಬಂದು, ಇಲ್ಲಿ ವಾಸ್ತವ್ಯ ಮಾಡಿ, 9ರ ಬೆಳಿಗ್ಗೆ 11.15ಕ್ಕೆ ವಿಮಾನದ ಮೂಲಕ ರಾಷ್ಟ್ರಪತಿ ಭವನಕ್ಕೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply