Connect with us

    LATEST NEWS

    ಉಳ್ಳಾಲದಂತ ಪ್ರದೇಶದಲ್ಲಿ ರಸ್ತೆ,ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ – ನಳಿನ್ ಕುಮಾರ್

    ಮಂಗಳೂರು ಜನವರಿ 03: ಉಳ್ಳಾಲದಂತಹ ಪ್ರದೇಶದಲ್ಲಿ ನೀವು ರಸ್ತೆ ಅಥವಾ ಒಳಚರಂಡಿ ಸಮಸ್ಯೆ ಬಗ್ಗೆ ಮಾತನಾಡಬೇಡಿ ಅಲ್ಲಿ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡಿ ಲವ್ ಜಿಹಾದ್ ನಿಂದ ರಕ್ಷಿಸಿ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.


    ಮಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮಂಗಳೂರು ಹೊರವಲಯ ಉಳ್ಳಾಲ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶ. ಇಲ್ಲಿ ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಎಂದು ನಳಿನ್ ಕುಮಾರ್ ಕಟೀಲು ಕರೆ ನೀಡಿದ್ದಾರೆ.

    ಲವ್ ಜಿಹಾದ್ ಇತ್ತೀಚೆಗೆ ಕಾಡುತ್ತಿರುವ ಬಹಳ ದೊಡ್ಡ ಸಾಮಾಜಿಕ ಪಿಡುಗು. ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಮೋಸದಿಂದ ಪ್ರೀತಿಯ ಆಮಿಷಕ್ಕೆ ಒಡ್ಡಿ ಅವರ ಬದುಕನ್ನೇ ನಾಶ ಮಾಡುತ್ತಿದ್ದಾರೆ. ಇದಕ್ಕೆ ನಿಮ್ಮ ಮಕ್ಕಳು ಬಲಿಯಾಗದಂತೆ ನೋಡಿಕೊಳ್ಳಿ. ಅದಕ್ಕೆ ಬಿಜೆಪಿಗೆ ಗೆಲ್ಲಿಸಿ ಅಧಿಕಾರ ನೀಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದೂ ಜನರ, ಹಿಂದೂ ಯುವಕ-ಯುವತಿಯರ ರಕ್ಷಣೆಗೆ ಬದ್ಧವಾಗಿದೆ ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply