Connect with us

    LATEST NEWS

    ಡಿಕೆಶಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪತ್ರಕರ್ತರಿಗೆ ಕ್ವಾರಂಟೈನ್ ನಲ್ಲಿರಲು ಸೂಚಿಸಿದ ಜಿಲ್ಲಾಡಳಿತ

    ಮಂಗಳೂರು ಅಗಸ್ಟ್ 2: ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಕೊರೊನಾ ಪಾಸಿಟಿವ್ ಆಗುತ್ತಿದ್ದಂತೆ ಬಹುತೇಕ ಕಾಂಗ್ರೇಸ್ ನಾಯಕರು ಕ್ವಾರಂಟೈನ್ ಆಗುತ್ತಿದ್ದು, ಮಾಜಿ ಸಚಿವ ರಮಾನಾಥ ರೈ ಸ್ವಯಂ ಕ್ವಾರೆಂಟೈನ್ ನಲ್ಲಿದ್ದು , ಮಾಜಿ ಸಚಿವ ಶಾಸಕ ಯು.ಟಿ ಖಾದರ್ ಈಗಾಗಲೇ ಕ್ವಾರಂಟೈನ್ ನಲ್ಲಿದ್ದಾರೆ.


    ಜುಲೈ 31ರಂದು ದಕ್ಷಿಣಕನ್ನಡ ಜಿಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗಮಿಸಿದ್ದ ಸಂದರ್ಭ ಐವಾನ್ ಡಿಸೋಜಾ ಅವರ ನಿಕಟ ಸಂಪರ್ಕದಲ್ಲಿದ್ದ ಹಿನ್ನಲೆ ರಮಾನಾಥ ರೈ ಅವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ.
    ಇನ್ನು ಜಿಲ್ಲಾಡಳಿತ ಡಿಕೆಶಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪತ್ರಕರ್ತರಿಗೂ ಕ್ವಾರೆಂಟೈನ್ ಆಗುವಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿಪುವ ಪತ್ರಕರ್ತರು ತಮ್ಮ ಆರೋಗ್ಯ ಬಗ್ಗೆ ನಿಕಟವಾಗಿ ಗಮನಿಸಿ, ಏನಾದರೂ ಲಕ್ಷಣಗಳು ( symptoms) ಕಂಡು ಬಂದಲ್ಲಿ ಆಸ್ಪತ್ರೆಯನ್ನು ತಕ್ಷಣ ಸಂಪರ್ಕಿಸಬೇಕು. ಹೊರಗಡೆ ಓಡಾಟ ನಿರ್ಬಂಧಿಸಲು ಜಿಲ್ಲಾಡಳಿತ ಕೊರಿದೆ.

    Share Information
    Advertisement
    Click to comment

    You must be logged in to post a comment Login

    Leave a Reply