Connect with us

LATEST NEWS

ನಾಳೆ ಕೇರಳದ ಮೊದಲ ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼಗೆ ಪ್ರಧಾನಿ ಮೋದಿ ಚಾಲನೆ

ವದೆಹಲಿ, ಎಪ್ರಿಲ್ 24: ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಂದ್ರೆ, ನಾಳೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಕಾರ್ಯಾಲಯದ ಪ್ರಕಾರ, ವಂದೇ ಭಾರತ್ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ತಯಾರಿಸಿದ, ಅರೆ-ಹೈ ಸ್ಪೀಡ್ ಮತ್ತು ಸ್ವಯಂ ಚಾಲಿತ ರೈಲು ಸೆಟ್ ಆಗಿದೆ. ರೈಲು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ಒದಗಿಸುತ್ತದೆ.

ಅ.25ರಂದು ಕೇರಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು 3,200 ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ನಗರದೊಂದಿಗೆ ತಡೆರಹಿತ ಸಂಪರ್ಕಕ್ಕಾಗಿ ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳ ಮೂಲಕ ಕೊಚ್ಚಿ ಸುತ್ತಮುತ್ತಲಿನ 10 ದ್ವೀಪಗಳನ್ನು ಸಂಪರ್ಕಿಸುವ ಕೊಚ್ಚಿ ವಾಟರ್ ಮೆಟ್ರೋವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *