LATEST NEWS
ಬೈಕ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ಬೈಕ್ ಸವಾರ ಬ್ಯಾಂಕ್ ಉದ್ಯೋಗಿ ಸಾವು….!!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬಜ್ಪೆ ಜೂನ್ 22: ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಗುರುಪುರದಲ್ಲಿ ನಡೆದಿದೆ. ಮೃತರನ್ನು ಪೊಳಲಿ ಕರಿಯಂಗಳ ನಿವಾಸಿ ದಿ.ಅಣ್ಣಿ ಪೂಜಾರಿ ಎಂಬವರ ಪುತ್ರ ಸಂತೋಷ್ (38) ಎಂದು ಗುರುತಿಸಲಾಗಿದೆ.
ವಾಮಂಜೂರಿನ ಸಹಕಾರಿ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದ ಸಂತೋಷ್, ಇಂದು ಬೆಳಗ್ಗೆ ಮನೆಯಿಂದ ಎಂದಿನಂತೆ ಬೈಕಿನಲ್ಲಿ ಬ್ಯಾಂಕಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗುರುಪುರ ಬ್ಯಾಂಕ್ ಬಳಿ ರಸ್ತೆಯ ಹಂಪ್ಸ್ ಬಳಿ ಬೈಕ್ ವೇಗ ಕಡಿಮೆಗೊಳಿಸಿದಾಗ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಸಂತೋಷ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರೆಂದು ತಿಳಿದುಂಬಂದಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login