LATEST NEWS
ವಕೀಲೆಗೆ ನಿಂದಿಸಿದ ಬಸ್ ಕಂಡಕ್ಟರ್ ಹಾಗೂ ಡ್ರೈವರ್ ಅರೆಸ್ಟ್
ಮಂಗಳೂರು ಅಕ್ಟೋಬರ್ 14 : ಮಂಗಳೂರು ನಗರದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಕೀಲೆ ಅವರಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಸ್ ಕಂಡೆಕ್ಟರ್ ಮತ್ತು ಚಾಲಕರಾದ ಭರತ್ ಸಾಲ್ಯಾನ್ ಮತ್ತು ಶಿವಕುಮಾರ್ ಎಂಬವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ದೇರಳಕಟ್ಟೆ ಸಮೀಪದ ಜಲಾಲ್ಬಾಗ್ ನಿವಾಸಿಯಾಗಿರುವ ವಕೀಲೆ ಮುಫೀದಾ ರಹ್ಮಾನ್ ಕಳೆದ ಸೋಮವಾರ ಮಧ್ಯಾಹ್ನ ನಗರದ ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ನಿಂದ ಸ್ಟೇಟ್ಬ್ಯಾಂಕ್ ಕಡೆಗೆ ತೆರಳುವ ರೂಟ್ ನಂಬ್ರ 19ರ ‘ಆ್ಯಶೆಲ್’ ಎಂಬ ಹೆಸರಿನ ಖಾಸಗಿ ಬಸ್ಸಿಗೆ ಹತ್ತುವ ವೇಳೆ ಚಾಲಕನು ಅಜಾಗರೂಕತೆಯಿಂದ ಮುಂದಕ್ಕೆ ಚಲಾಯಿಸಿದರೆ, ಕಂಡೆಕ್ಟರ್ ವಕೀಲೆಯ ಜೊತೆ ಅತಿರೇಕದಿಂದ ವರ್ತಿಸಿ ಮಾನಸಿಕ ಕಿರುಕುಳ ನೀಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ಪ್ರಕರಣ ದಾಖಲಿಸಿಕೊಂಡರೂ ಕೊಂಡರೂ ಆರೋಪಿಯನ್ನು ಬಂಧಿಸದ ಬಗ್ಗೆ ಭಾರಿ ಟೀಕೆಗಳು ವ್ಯಕ್ತವಾಗಿತ್ತು. ಘಟನೆ ನಡೆದ ನಾಲ್ಕು ದಿನದ ಬಳಿಕ ಆರೋಪಿಗಳನ್ನು ಬಂಧಿಸಿ ಜೆಎಂಎಫ್ಸಿ 6ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ ಬಿ. ವಾದಿಸಿದ್ದರು.
You must be logged in to post a comment Login