KARNATAKA
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ – ಪ್ರಿಯಾಂಕ ಖರ್ಗೆ
ಬೆಂಗಳೂರು, ಮೇ 27: ಪ್ರಿಯಾಂಕ ಖರ್ಗೆ ಹಾಗೂ ಬಿಜೆಪಿ ನಡುವೆ ನಡೆಯುತ್ತಿರುವ ಹಿಂದೂ ಸಂಘಟನೆಗಳ ಬ್ಯಾನ್ ವಿಚಾರ ಇದೀಗ ಮತ್ತಷ್ಟು ಮಂದುವರೆದಿದ್ದು, ಬಿಜೆಪಿಯವರ ಹೇಳಿಕೆಗಳಿಗೆ ಪ್ರಿಯಾಂಕ ಖರ್ಗೆ ಸರಿಯಾಗಿ ತಿರುಗೇಟು ನೀಡಿದ್ದು, ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿ ನೋಡಿ, ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಶಕ್ತಿಯನ್ನು ನಾವು ತೋರಿಸುತ್ತೇವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್, ಬಿಜೆಪಿಗರು, “ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ. ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ.” ಎಂದು ಖಡಕ್ ಆಗಿ ಹೇಳಿದ್ದಾರೆ.
You must be logged in to post a comment Login