Connect with us

    LATEST NEWS

    ಮಂಗಳೂರಿಗರಿಗೆ ಶುಭಸುದ್ದಿ ಮುಂದಿನ ಆದೇಶದ ತನಕ ಕಡ್ಡಾಯ ಪ್ರಾಪರ್ಟಿ ಕಾರ್ಡ್ ಗೆ ವಿನಾಯಿತಿ

    ಮಂಗಳೂರಿಗರಿಗೆ ಶುಭಸುದ್ದಿ ಮುಂದಿನ ಆದೇಶದ ತನಕ ಕಡ್ಡಾಯ ಪ್ರಾಪರ್ಟಿ ಕಾರ್ಡ್ ಗೆ ವಿನಾಯಿತಿ

    ಮಂಗಳೂರು ಅಕ್ಟೋಬರ್ 11: ಮಂಗಳೂರಿಗರಿಗೆ ತಲೆ ನೋವು ತಂದಿಟ್ಟಿದ್ದ ಕಡ್ಡಾಯ ಪ್ರಾಪರ್ಟಿ ಕಾರ್ಡ್ ಆದೇಶದಿಂದ ರಾಜ್ಯ ಸರಕಾರ ವಿನಾಯಿತಿ ನೀಡಿರುವುದು ಸ್ವಲ್ಪಮಟ್ಟಿನ ಸಮಾಧಾನ ತರಿಸಿದೆ.

    ಮಂಗಳೂರು ನಗರದಲ್ಲಿ ಆಸ್ತಿ ನೋಂದಣಿ ಸಂದರ್ಭದಲ್ಲಿ ಪಿ.ಆರ್.ಕಾರ್ಡ್ ( ಪ್ರಾಪರ್ಟಿ ಕಾರ್ಡ್) ಕಡ್ಡಾಯಗೊಳಿಸಿದ್ದರಿಂದಾಗಿ ಮಂಗಳೂರಿನಲ್ಲಿ ಆಸ್ತಿ ಮಾರಾಟ ನೊಂದಣಿಯಲ್ಲಿ ಭಾರಿ ಅಕ್ರಮ ನಡೆಯುತ್ತಿತ್ತು ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಸಾರ್ವಜನಿಕರ ಕೈಗೆ ಸಿಗದೆ ಕೇವಲ ಮಧ್ಯವರ್ತಿಗಳಿಂದ ಮಾತ್ರ ಪ್ರಾಪರ್ಟಿ ಕಾರ್ಡ್ ಸಿಗಲಿದೆ ಎನ್ನುವ ಮಟ್ಟಕ್ಕೆ ಸಮಸ್ಯೆ ಉಂಟಾಗಿತ್ತು.

    ಈ ಹಿನ್ನಲೆಯಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳು ಮತ್ತು ಮಾಧ್ಯಮ ವರ್ಗದವರಿಂದ ಸಾಕಷ್ಟು ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದರಿಂದ ಕಡ್ಡಾಯ ಪ್ರಾಪರ್ಟಿ ಕಾರ್ಡ್ ಯೋಜನೆಯಿಂದ ವಿನಾಯಿತಿ ನೀಡಲಾಗಿದೆ ಎಂದು ರಾಜ್ಯ ಕಂದಾಯ ಇಲಾಖೆ ಜಂಟಿ ಕಾರ್ಯದರ್ಶಿಯವರ ಪ್ರಕಟಣೆ ತಿಳಿಸಿದೆ. ಹಾಲಿ ಇರುವ ಯೋಜನೆಯನ್ನು ಪೂರ್ಣಪ್ರಮಾಣವಾಗಿ ಸಮಸ್ಯೆಗಳನ್ನು ಬಗೆಹರಿಸುವ ತನಕ ಮುಂದುವರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply