Connect with us

    LATEST NEWS

    ಬಜೆಟ್ ವಿರುದ್ದ ಉಡುಪಿಯ ಮೀನು ಮಾರುಕಟ್ಟೆಯಲ್ಲಿ ಮಹಿಳೆಯರಿಂದ ವಿಭಿನ್ನ ಪ್ರತಿಭಟನೆ

    ಬಜೆಟ್ ವಿರುದ್ದ ಉಡುಪಿಯ ಮೀನು ಮಾರುಕಟ್ಟೆಯಲ್ಲಿ ಮಹಿಳೆಯರಿಂದ ವಿಭಿನ್ನ ಪ್ರತಿಭಟನೆ

    ಉಡುಪಿ ಜುಲೈ 14: ಸಮ್ಮಿಶ್ರ ಸರಕಾರದ ಬಜೆಟ್ ವಿರುದ್ದ ಆಕ್ರೋಶ ಇನ್ನು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಕುಮಾರ ಸ್ವಾಮಿ ಮಂಡಿಸಿದ ಬಜೆಟ್ ವಿರುದ್ದ ಉಡುಪಿಯಲ್ಲಿ ಮೀನುಗಾರ ಮಹಿಳೆಯ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್ ನಲ್ಲಿ ಕರಾವಳಿಗೆ ಯಾವುದೇ ರೀತಿಯ ಅನುದಾನಗಳನ್ನು ನೀಡದ ಹಿನ್ನಲೆಯಲ್ಲಿ ಕರಾವಳಿಯ ಜನರು ತಿರುಗಿ ಬಿದ್ದಿದ್ದಾರೆ. ಬಜೆಟ್ ನಲ್ಲಿ ಕರಾವಳಿಗೆ ಯಾವುದೇ ಅನುದಾನ ಕೊಡದೆ, ಯೋಜನೆಗಳನ್ನು ಘೋಷಣೆ ಮಾಡದೆ ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಅದರಲ್ಲೂ ಕರಾವಳಿಯ ಪ್ರಬಲ ಸಮುದಾಯ ಮೊಗವೀರರು ಎಚ್ ಡಿಕೆ ವಿರುದ್ಧ ಕೋಪಗೊಂಡಿದ್ದಾರೆ. ಬಜೆಟ್ ನಲ್ಲಿ ನಮಗೆ ಏನು ಕೊಟ್ಟಿದ್ದೀರಿ? ನೀವು ನಮ್ಮ ಸಿಎಂ ಅಲ್ಲವೇ ಅಲ್ಲ ಅಂತ ಎಂದು ಹೇಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಕರಾವಳಿ ಜೊತೆ ತಾರತಮ್ಯ ನಿಲ್ಲಿಸಿ. ಪ್ರಜಾಪ್ರಭುತ್ವದ ಕೊಲೆಗಾರ ನೀವು. ಕುಮಾರಸ್ವಾಮಿಯವರೇ ನೀವು ನಮ್ಮ ಸಿಎಂ ಅಲ್ಲ ಇಂತಹ ಸ್ಲೋಗನ್ ಗಳನ್ನು ಪಕ್ಕದಲ್ಲಿಟ್ಟು ಉಡುಪಿಯ ಮೀನು ಮಾರುಕಟ್ಟೆಯಲ್ಲಿ ಮೊಗವೀರ ಮಹಿಳೆಯರು ವ್ಯಾಪಾರ ಮಾಡುತ್ತಿದ್ದಾರೆ.
    ಈ ನಡುವೆ ಉಡುಪಿಯಲ್ಲಿ ಮೀನುಗಾರ ಮಹಿಳೆಯರು ಮೀನು ಮಾರುಕಟ್ಟೆಯಲ್ಲಿ ಬೋರ್ಡ್ ಗಳನ್ನು ಅಳವಡಿಸಿದ್ದಾರೆ. ಮೀನು ಖರೀದಿಗೆ ಬರುವವರ ಬಳಿ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ.

    13 ವಿಧಾನಸಭಾ ಕ್ಷೇತ್ರಗಳ ಕರಾವಳಿಯ ಎರಡು ಜಿಲ್ಲೆಯಲ್ಲಿ ಒಂದು ಕಾಂಗ್ರೆಸ್ ಗೆದ್ದಿದೆ. 13 ಶಾಸಕರು ಬಿಜೆಪಿಯಿಂದ ಗೆದ್ದಿದ್ದಾರೆ. ಹೀಗಾಗಿ ಈ ಬಾರಿ ಸರಕಾರದಿಂದ ಕರಾವಳಿ ಭಾಗಕ್ಕೆ ಅನುದಾನವನ್ನು ಸಿಎಂ ನೀಡಿಲ್ಲ. ಮುಂದಿನ ಚುನಾವಣೆಯಲ್ಲಿ ಸರಕಾರಕ್ಕೆ ಮತ್ತು ಜೆಡಿಎಸ್ ಬೆಂಬಲ ನೀಡಿದ ಕಾಂಗ್ರೆಸ್ಸಿಗೆ ಇದರಿಂದ ಹಿನ್ನಡೆಯಾಗುವ ಸಾಧ್ಯತೆಯಿದೆ.

    Share Information
    Advertisement
    Click to comment

    You must be logged in to post a comment Login

    Leave a Reply