Connect with us

    DAKSHINA KANNADA

    ಜೈನ ಮುನಿ ಹತ್ಯೆ, ವಕ್ಫ್ ಬೋರ್ಡ್ ರದ್ದು ಆಗ್ರಹಿಸಿ ಪ್ರತಿಭಟನೆ

    ಪುತ್ತೂರು, ಜುಲೈ 18: ಜೈನ ಮುನಿ ಹತ್ಯೆ, ವಕ್ಫ್ ಬೋರ್ಡ್ ರದ್ದು ಆಗ್ರಹಿಸಿ ಹಿಂದೂ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

    ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಹಿಂದೂ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಧಾರ್ಮಿಕ ಚಿಂತಕ ಮಿತ್ರಸೇನ ಜೈನ್, ರಾಜ್ಯದಲ್ಲಿ ಸಾಧು-ಸಂತರಿಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಜೈನ ಮುನಿಗಳು ಅಹಿಂಸಾ ಮಾರ್ಗದಲ್ಲಿ ನಡೆಯುವವರು, ಅಂಥವರನ್ನೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಲಾಗಿದೆ.

    ಹತ್ಯೆ‌ ಮಾಡಿದ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಬೇಕು,ಇಂಥ‌ ಘಟನೆಗಳು ನಡೆಯದಂತೆ‌ ಸರಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply