DAKSHINA KANNADA
ಸಂಪಾಜೆ ಗೂನಡ್ಕ ಮಸೀದಿಯಿಂದ ಅರಣ್ಯ ಭೂಮಿ ಅತಿಕ್ರಮಣ ಆರೋಪ – ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ
ಸುಳ್ಯ ಎಪ್ರಿಲ್ 11: ಸಂಪಾಜೆ ಗೂನಡ್ಕ ಮಸೀದಿಯಿಂದ ಅರಣ್ಯ ಅತಿಕ್ರಮಣ ತೆರವುಗೊಳಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸುಳ್ಯ ಎಸಿಎಫ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಲಂಚ ಪಡೆದು ಅರಣ್ಯ ಅಧಿಕಾರಿಗಳು ಅತಿಕ್ರಮಣಕ್ಕೆ ಸಹಕರಿಸಿದ್ದಾರೆ ಎಂದು ದೂರಿದ ಪ್ರತಿಭಟನಾಕಾರರು, ನ್ಯಾಯಾಲಯಕ್ಕೂ ಸೂಕ್ತ ದಾಖಲೆ ನೀಡದೆ ಅತಿಕ್ರಮಿಗಳಿಗೆ ಸಹಾಯ ಮಾಡಿದ್ದಾರೆ.
ನ್ಯಾಯಾಲಯಕ್ಕೆ ಸೂಕ್ತ ದಾಖಲೆ ಸಲ್ಲಿಸಿ ಅತಿಕ್ರಮಣ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಅರಣ್ಯ ಇಲಾಖೆ ಅಧಿಕಾರಿಗಳು, ಕೂಡಲೇ ನ್ಯಾಯಾಲಯಕ್ಕೆ ಸೂಕ್ತ ದಾಖಲೆ ಸಲ್ಲಿಸುವ ಭರವಸೆ ನೀಡಿದ ಅಧಿಕಾರಿಗಳು ಭರವಸೆಯ ಬಳಿಕ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು.
You must be logged in to post a comment Login