Connect with us

BELTHANGADI

ರಸ್ತೆಯಲ್ಲಿ ಸ್ಕಿಡ್ ಆಗಿ ಬೀಳುತ್ತಿರುವ ದ್ವಿಚಕ್ರ ಸವಾರರು – ಏಕಾಂಗಿಯಾಗಿ ರಸ್ತೆಯಲ್ಲಿ ಪ್ರತಿಭಟನೆಗೆ ಕುಳಿತ ಉಜಿರೆಯ ಹೋಟೆಲ್ ಮಾಲಕ ಪ್ರವೀಣ್

ಬೆಳ್ತಂಗಡಿ ಜೂನ್ 23: ಕರಾವಳಿಯಲ್ಲಿ ಮುಂಗಾರು ಮಳೆ ಪ್ರಾರಂಭವಾಗುತ್ತಿದ್ದಂತೆ ಇದೀಗ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಯ ಅಸಲಿ ಬಣ್ಣ ಒಂದೊಂದೆ ಹೊರಗೆ ಬರುತ್ತಿದೆ. ರಸ್ತೆಯಲ್ಲಿ ಸ್ಕಿಡ್ ಆಗಿ ಬೈಕ್ ಸವಾರರು ಬೀಳುತ್ತಿರುವ ಸ್ಥಿತಿ ಕಂಡು ಹೊಟೇಲ್ ಮಾಲೀಕರೊಬ್ಬರು ರಸ್ತೆ ಮಧ್ಯೆ ಪ್ರತಿಭಟನೆಗೆ ಕುಳಿತ ಘಟನೆ ಉಜಿರೆಯಲ್ಲಿ ನಡೆದಿದೆ.


ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಬೆಳ್ತಂಗಡಿಯಿಂದ ಮುಂಡಾಜೆಯವರೆಗೆ ರಸ್ತೆ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದ್ದು, ವಾಹನ ಸವಾರರು ರಸ್ತೆಯಲ್ಲಿ ಬೀಳುತ್ತಿರುವುದನ್ನು ಗಮನಿಸಿ ಉಜಿರೆಯ ಹೋಟೆಲ್ ಮಾಲಕ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಅವರು ಏಕಾಂಗಿಯಾಗಿ ಕೆಸರಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ರಸ್ತೆ ಅಗಲೀಕರಣ ಕಾಮಗಾರಿಯಿಂದ ಉಜಿರೆಯಿಂದ ಮುಂಡಾಜೆ ಸಾಗುವ ರಸ್ತೆ ಬೆಳ್ತಂಗಡಿಯಿಂದ ಮುಂದಕ್ಕೆ ಕಾಶಿಬೆಟ್ಟು ಸಮೀಪ, ಮಡಂತ್ಯಾರಿಂದ ಮುಂದಕ್ಕೆ ಬರುವ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ಸ್ಥಿತಿಯಿದೆ. ದ್ವಿಚಕ್ರ ವಾಹನ ಸವಾರರು ಸ್ವಲ್ಪ ಏರುಪೇರಾದರೂ ಬಿದ್ದು ಅನಾಹುತ ಸಂಭವಿಸುತ್ತಿದೆ. ಉಜಿರೆಯಲ್ಲಿ ರವಿವಾರ ಹೆದ್ದಾರಿ ಕೆಸರುಮಯವಾದ ಪರಿಣಾಮ ಎರಡು ಮೂರು ದ್ವಿಚಕ್ರ ಸವಾರರು ಅಪಾಘಾತಕ್ಕೀಡಾಗಿದ್ದಾರೆ ಇದನ್ನು ಗಮನಿಸಿದ ಪ್ರವೀಣ್ ಅವರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಕಳೆದ ವಾರ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಬಿಸಿರೋಡ್ ನಿಂದ ಚಾರ್ಮಾಡಿ ವರೆಗೆ ರಸ್ತೆ ಸಮಸ್ಯೆ ಕುರಿತು ಪರಿಶೀಲಿಸಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ವಾರದೊಳಗೆ ಸಮಸ್ಯೆ ಬಗೆಹರಿಸಲು ಸೂಚಿಸಿದ್ದಾರೆ. ಆದರೆ ಬೇಕಾಬಿಟ್ಟಿ ಕಾಮಗಾರಿಯಿಂದ ಜಿಲ್ಲಾಧಿಕಾರಿಗಳ ಆಜ್ಞೆಗೂ ಕಿಮ್ಮತ್ತಿಲ್ಲ ಎಂಬಂತಾಗಿದೆ. ಇದರ ಬಗ್ಗೆ ತಕ್ಷಣ ಸೂಕ್ತ ಕ್ರಮ ವಹಿಸಬೇಕು. ಇಲ್ಲವೇ ನಿರಂತರ ಹೋರಾಟ ನಡೆಸುವುದಾಗಿ ಪ್ರವೀಣ್ ಹಳ್ಳಿಮನೆ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *