Connect with us

    LATEST NEWS

    ಸಿಎಂ ತಂಗಿದ್ದ ಹೊಟೇಲ್ ಗೆ ನುಗ್ಗಲು ಯತ್ನಿಸಿದ ಕಾಂಗ್ರೇಸ್ ಕಾರ್ಯಕರ್ತರು

    ಮಂಗಳೂರು ಎಪ್ರಿಲ್ 12:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಸಿಎಂ ತಂಗಿದ್ದ ಹೊಟೇಲ್ ಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.


    ನನ್ನ ಸಾವಿಗೆ ಕಾರಣ ಸಚಿವ ಈಶ್ವರಪ್ಪ ಎಂದು ಆರೋಪ ಮಾಡಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನಲೆ ಸಚಿವ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಉಚ್ಚಾಟಿಸಬೇಕೆಂದು ಕಾಂಗ್ರೇಸ್ ಆಗ್ರಹಿಸಿದ್ದು, ಇಂದು ದಕ್ಷಿಣಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದ್ದ ಹೊಟೇಲ್ ಗೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ.


    ಮಂಗಳೂರಿನ ಓಷಿಯನ್ ಪರ್ಲ್ ನಲ್ಲಿ ಸಿಎಂ ಸಭೆ ನಡೆಸುತ್ತಿದ್ದು, ಈ ಹೊಟೇಲ್ ಗೆ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಏಕಾಏಕಿ ನುಗ್ಗಲು ಯತ್ನಿಸಿದ್ದರಿಂದ ತಬ್ಬಿಬ್ಬಾದ ಪೊಲೀಸರು, ತಕ್ಷಣ ಕಾಂಗ್ರೆಸ್ ಕಾರ್ಯಕರ್ತರನ್ನ ಹೊಟೇಲ್ ಬಾಗಿಲಿನಿಂದ ರಸ್ತೆಗೆ ತಳ್ಳಿಕೊಂಡೇ ಬಂದಿದ್ದಾರೆ. ಬಳಿಕ ಕಾರ್ಯಕರ್ತರನ್ನ ಬಂಧಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply