Connect with us

LATEST NEWS

ಶಬರಿಮಲೆ ಕುರಿತ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ದ ಮಂಗಳೂರಿನಲ್ಲಿ ಪ್ರತಿಭಟನೆ

ಶಬರಿಮಲೆ ಕುರಿತ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು ಅಕ್ಟೋಬರ್ 09: ಶಬರಿಮಲೆ ಕ್ಷೇತ್ರಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ ಸುಪ್ರೀಂಕೋರ್ಟ್ ನ ತೀರ್ಪಿನ ವಿರುದ್ದ ಮಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನಾ ಸಭೆ ನಡೆಸಲಾಯಿತು.

ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ನೂರಾರು ಮಂದಿ ಮಹಿಳೆಯರು,ಅಯ್ಯಪ್ಪ ಸ್ವಾಮಿ ಭಕ್ತರು ಭಾಗವಹಿಸಿ ಸುಪ್ರೀಂ ಆದೇಶದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಹಿಂದೂ‌ ಸಂಘಟನೆ ಗಳ ಮುಖಂಡರು ಶಬರಿ ಮಲೆ ಅತ್ಯಂತ ಪರಿಶುದ್ಧ ಕ್ಷೇತ್ರ ವಾಗಿದೆ. ಮಹಿಳೆಯರ ಪ್ರವೇಶ ವಿಚಾರವನ್ನಿಟ್ಟುಕೊಂಡು ಹಿಂದೂ ಧರ್ಮದ ಒಡೆಯುವ ಕೆಲಸವಾಗುತ್ತಿದೆ.

ಕೇರಳ ಜನ ಈಗಾಗಲೇ ಅಂದೋಲನ ನಡೆಸುತ್ತಿದ್ದು ಕೇರಳದ ಜನರ ಜೊತೆ ಮಂಗಳೂರಿಗರು ಕೈಜೋಡಿಸುವುದಾಗಿ ತಿಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಕುರಿತು ರಾಷ್ಟ್ರಪತಿಗಳು ಹಾಗು ಪ್ರಧಾನಮಂತ್ರಿ ಮಧ್ಯಪ್ರವೇಶಿಸಿ ಜನರ ನಂಬಿಕೆಯನ್ನು ಉಳಿಸಬೇಕಾಗಿ ಮನವಿ ಮಾಡಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *