Connect with us

DAKSHINA KANNADA

ರಾಹುಲ್ ಗಾಂಧಿ ವಿರುದ್ದ ಪ್ರಚೋದನಾಕಾರಿ ಹೇಳಿಕೆ: ಶಾಸಕ ಭರತ್ ಶೆಟ್ಟಿ ವಿರುದ್ಧ FIR ದಾಖಲು..!

ಮಂಗಳೂರು : ಕಾಂಗ್ರೆಸ್  ನಾಯಕ ರಾಹುಲ್ ಗಾಂಧಿ  ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ  ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ FIR  ದಾಖಲಾಗಿದೆ.

ಮಂಗಳೂರು ಪಾಲಿಕೆ ಸದಸ್ಯ ಅನಿಲ್ ಕುಮಾರ್‌ ನೀಡಿದ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353ರ ಅಡಿ ಡಾ. ಭರತ್‌ ಶೆಟ್ಟಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹಿಂದೂಗಳ ಕುರಿತುಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕವು ನಗರದ ಕಾವೂರಿನಲ್ಲಿ ಸೋಮವಾರ ಪ್ರತಿಭಟನೆ ಏರ್ಪಡಿಸಿತ್ತು. ಪ್ರತಿಭಟನೆಯಲ್ಲಿ ಭಾಗವಿಸಿಹಿ ಮಾತಾಡಿದ್ದ ಭರತ್ ಶೆಟ್ಟಿ ‘ಪಾರ್ಲಿಮೆಂಟ್‌ ಒಳಗೆ ಹೋಗಿ ಯಾರಾದರೂ ರಾಹುಲ್‌ ಗಾಂಧಿ ಕೆನ್ನೆಗೆ ಎರಡು ಬಾರಿಸಿದರೆ ಒಳ್ಳೆಯದಿತ್ತು. ಅವನಿಗೆ ಎರಡು ಕೊಟ್ಟರೆ ಸರಿಯಾಗುತ್ತಿತ್ತು’ ಎಂದು ಹೇಳಿಕೆ ನೀಡಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *