BELTHANGADI
ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಪ್ರೇಯಸಿ- ಮನೆಗೆ ನುಗ್ಗಿ ಪ್ರೇಯಸಿಗೆ ಚೂರಿ ಇರಿದ ಪಾಗಲ್ ಪ್ರೇಮಿ
ಬೆಳ್ತಂಗಡಿ : ಪ್ರೀತಿಸಿದ ಹುಡುಗಿ ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಕಾರಣ ಹುಡುಗಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಸಮೀಪ ನಡೆದಿದೆ.
ಚೂರಿ ಇರಿದ ಪಾಗಲ್ ಪ್ರೇಮಿಯನ್ನು ಪುಂಜಾಲಕಟ್ಟೆಯ ನಿವಾಸಿ ಶಮೀರ್ (22) ಎಂದು ಗುರುತಿಸಲಾಗಿದ್ದು, ಈತ ಲಾಯಿಲ ಗ್ರಾಮದ ನಿವಾಸಿ 21 ವರ್ಷದ ಯುವತಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗಲು ಮನೆಬಿಟ್ಟು ಬರಲು ಒತ್ತಾಯಿಸುತ್ತಿದ್ದ.
ಆದರೆ ಯುವತಿ ಅದನ್ನು ತಿರಸ್ಕರಿಸಿದ್ದರಿಂದ ಕೋಪಗೊಂಡ ಪ್ರೇಮಿ ಎಪ್ರಿಲ್ 6 ರಂದು ರಾತ್ರಿ 10.20ಕ್ಕೆ ಯುವತಿ ಮನೆಗೆ ನುಗ್ಗಿ ಆಕೆಗೆ ಚೂರಿ ಇರಿದಿದ್ದಾನೆ.
ಯುವತಿಯ ಎಡಕೈ, ಬಲಕೈ , ಮತ್ತು ಕುತ್ತಿಗೆಗೆ ಗಾಯವಾಗಿದೆ. ತತ್ ಕ್ಷಣ ಮನೆಮಂದಿ ಆತನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login