Connect with us

    LATEST NEWS

    ಹಿಂದೂ ದೇವಾಲಯಗಳನ್ನು ರಕ್ಷಿಸಿ……… ಆಸ್ಟ್ರೇಲಿಯಾ ವಲಸೆ ಸಚಿವರ ಬಳಿ ಪುತ್ತಿಗೆಶ್ರೀ ಆಗ್ರಹ

    ಆಸ್ಟ್ರೇಲಿಯಾ : ವಿಶ್ವ ಪರ್ಯಾಯ ಸಂಚಾರದಲ್ಲಿರುವ ಭಾವಿ ಪರ್ಯಾಯ ಮಠಾಧೀಶರಾದ ಪೂಜ್ಯ ಪುತ್ತಿಗೆ ಶ್ರೀಪಾದರನ್ನು ಆಸ್ಟ್ರೇಲಿಯಾ ಅನಿವಾಸಿ ವಲಸೆ ಸಚಿವರಾದ ಆಂಡ್ರೂ ಗೈಲ್ಸ್ ಇವರು ತಮ್ಮ ನಿವಾಸಕ್ಕೆ ಕರೆಯಿಸಿ ಆಶೀರ್ವಾದ ಪಡೆ ಕೊಂಡರು .


    ಈ ಸಂದರ್ಭದಲ್ಲಿ ಪೂಜ್ಯ ಶ್ರೀಪಾದರು ಇತ್ತೀಚಿಗೆ ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿ ಆಕ್ರಮಣ ಮಾಡಿ ಹಾನಿ ಮಾಡಿರುವ ಬಗ್ಗೆ ಶೀಘ್ರ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು . ಮಾನ್ಯ ಸಚಿವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆಯಿತ್ತು ಶ್ರೀಗಳ ಸಲಹೆಯನ್ನು ಪಡೆದುಕೊಂಡರು.


    ಭಾರತೀಯರಿಗೆ ವೀಸಾ ಕಾರ್ಯಗಳ ಶೀಘ್ರ ವಿಲೇವಾರಿ ಬಗ್ಗೆಯೂ ಪ್ರಸ್ತಾವಿಸಲಾಯಿತು . ಸಚಿವರು ಈ ಬಗ್ಗ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆಯಿತ್ತರು. ಪೂಜ್ಯ ಶ್ರೀಪಾದರು ಮುಂಬರುವ ತಮ್ಮ ಪರ್ಯಾಯಕ್ಕೆ ಪ್ರೀತಿಯಿಂದ ಆಹ್ವಾನಿಸಿದರು .ಸಚಿವರು ತಮ್ಮ ಮಾತಿನಲ್ಲಿ ಶ್ರೀಪಾದರ ಕೋಟಿಗೀತಾ ಲೇಖನ ಯಜ್ಞದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು . ಪೂಜ್ಯ ಶ್ರೀಪಾದರು ವಿಶ್ವಬ್ರಾತೃತ್ವ ವನ್ನು ಸಾರುವ ಸ್ಮರಣಿಕೆಯನ್ನು ನೀಡಿ ಆಶೀರ್ವದಿಸಿದರು .

     

    Share Information
    Advertisement
    Click to comment

    You must be logged in to post a comment Login

    Leave a Reply