Connect with us

    DAKSHINA KANNADA

    ಪುತ್ತೂರು ಬೈಪಾಸ್ – ಸ್ಕೂಟರ್ ಮೇಲೆ ಹರಿದ ಟಿಪ್ಪರ್ ಲಾರಿ – ಓರ್ವ ಸಾವು…!!

    ಪುತ್ತೂರು ಮೇ 04: ಟಿಪ್ಪರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರಿನ ಬೈಪಾಸ್ ಎಂಬಲ್ಲಿ ನಡೆದಿದೆ.

    ಮೃತರನ್ನು ಅರಿಯಡ್ಕ‌ ನಿವಾಸಿ ಸಿನಾನ್ (19) ಎಂದು ಗುರುತಿಸಲಾಗಿದ್ದು, ಸಂಟ್ಯಾರ್ ನಿವಾಸಿ ಆಸೀರ್ (18) ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಟಿಪ್ಪರ್ ಸ್ಕೂಟರ್ ಸಹ ಸವಾರನ ಮೇಲೆ ಹರಿದಿದ್ದು,  ತಲೆ ಸಂಪೂರ್ಣ ನಜ್ಜುಗುಜ್ಜಾಗಿದೆ.

    ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಸೇರಿದಂತೆ ಹಿರಿಯ ಪೋಲೀಸ್‌ ಅಧಿಕಾರಿಗಳ ಭೇಟಿ ನೀಡಿದ್ದು, ಪುತ್ತೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply