DAKSHINA KANNADA
puttur : ಬಜರಂಗದಳ ಮುಖಂಡ ಆತ್ಮಹತ್ಯೆ
ಪುತ್ತೂರು : ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್ ಕೆಯ್ಯೂರು (27) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಚಿನ್ ಕೊಯ್ಯೂರು ಘಟಕದ ಸುರಕ್ಷಾ ಪ್ರಮುಖ್ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಬಿಸಿಎ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದ ಸಚಿನ್ ಉದ್ಯೋಗದ ಹುಡುಕಾಟದಲ್ಲಿದ್ದರು. ಗ್ರಾಮದ ಪಂಚಾಯತ್ ಸಮೀಪ ಗೇರು ಮರವೊಂದಕ್ಕೆ ಕೇಸರಿ ಶಾಲು ಬಿಗಿದು ನೇಣಿಗೆ ಶರಣಾಗಿದ್ದಾರೆ. ಅತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login