DAKSHINA KANNADA
ಪುತ್ತೂರು – ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಅಪಘಾತ – ಶಾಲಾ ಶಿಕ್ಷಕಿ ಸಾವು
ಪುತ್ತೂರು ಜನವರಿ 29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ.
ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ ಪೋಳ್ಯ ಎಂಬಲ್ಲಿ ಏಕಾಏಕಿ ಬಂದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಸಣ್ಣ ಪುಟ್ಟ ಗಾಯವಾಗಿದ್ದು, ಸುರೇಶ್ ಕುಲಾಲ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login