DAKSHINA KANNADA
ಕೇಪುಳು ಜಂಕ್ಷನ್ನಲ್ಲಿ ಬೈಕ್ ಸ್ಕೂಟರ್ ನಡುವೆ ಡಿಕ್ಕಿ – ಸವಾರರಿಗೆ ಗಂಭೀರ ಗಾಯ
ಪುತ್ತೂರು ಅಕ್ಟೋಬರ್ 27: ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ನಲ್ಲಿ ನಡೆದಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿವೆ.
ಸ್ಕೂಟರ್ ಸವಾರ ಪುತ್ತೂರಿನ ಹಾರಾಡಿ ನಿವಾಸಿ ಅಬ್ದುಲ್ ರಹಿಮಾನ್ ಹಾಗೂ ಬೈಕ್ ಸವಾರ ಬೆಳ್ತಂಗಡಿ ತಾಲ್ಲೂಕು ಪುತ್ತಿಲ ನಿವಾಸಿ ಆದಂ ಯಾನೆ ಜಾಬೀರ್ ಗಂಭೀರ ಗಾಯಗೊಂಡಿದ್ದಾರೆ. ಸಹ ಸವಾರೆಯಾಗಿದ್ದಅಬ್ದುಲ್ ರಹಿಮಾನ್ ಪತ್ನಿ ಝೀನತ್ ಬಾನು ಅವರಿಗೂ ಗಾಯಗಳಾಗಿವೆ. ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್ ಮತ್ತು ಪುತ್ತೂರು-ಉಪ್ಪಿನಂಗಡಿ ರಸ್ತೆಯಿಂದ ಕೇಪುಳು ಸಂಪರ್ಕ ರಸ್ತೆಗೆ ತಿರುಗುತ್ತಿದ್ದ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಅಬ್ದುಲ್ ರಹಿಮಾನ್ ಮತ್ತು ಆದಂ ಯಾನೆ ಜಾಬೀರ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಝೀನತ್ ಬಾನು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login