Connect with us

    DAKSHINA KANNADA

    ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಚಾಲಕ ಸ್ಥಳದಲ್ಲಿಯೇ ಸಾವು…ಯುವತಿ ಸ್ಥಿತಿ ಗಂಭೀರ

    ಪುತ್ತೂರು: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ.


    ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿಯಿಂದ ಪುತ್ತೂರು ಮಾರ್ಗವಾಗಿ ಬಜ್ಪೆಗೆ ಹೋಗುತ್ತಿದ್ದ ಹೊಂಡೈ ಕಾರು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿತ್ತು. ಅಪಘಾತದಿಂದ ಎರಡೂ ಕಾರುಗಳು ನಜ್ಜುಗುಜ್ಜಾಗಿದ್ದು, ಹೊಂಡೈ ಕಾರಿನ ಚಾಲಕ ಮೃತಪಟ್ಟಿದ್ದಾರೆ.


    ಮೃತಪಟ್ಟವರನ್ನು ಹೊಂಡೈ ಕಾರು ಚಾಲಕ ರಾಜು ಎಂದು ಗುರುತಿಸಲಾಗಿದೆ. ಮಂಗಳೂರು ತಾಲೂಕಿನ ಬಜ್ಪೆ ನಿವಾಸಿಗಳಾದ ರಾಜು ಪೂಜಾರಿ ಅವರ ಪತ್ನಿ ನೇತ್ರಾವತಿ, ಪುತ್ರಿ ಜ್ಯೋತಿ ಹಾಗೂ ಪುತ್ರ ಚೇತನ್ ಗಾಯಗೊಂಡವರು. ಈ ಪೈಕಿ ಜ್ಯೋತಿ ಅವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ರಾಜು ಪೂಜಾರಿ ಅವರ ಕುಟುಂಬವು ತಲಕಾವೇರಿಗೆ ಭಾನುವಾರ ಮುಂಜಾನೆ ಮನೆಯಿಂದ ಹೊರಟಿದ್ದು, ಅಲ್ಲಿಗೆ ಹೋಗಿ ಹಿಂದಿರುಗಿ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply