DAKSHINA KANNADA
ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ
ಪುತ್ತೂರು ಮಾರ್ಚ್ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ.
ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ದಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕ್ ಸೈಡ್ ಕೋಡುವ ಸಂದರ್ಭ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಾಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
You must be logged in to post a comment Login