ಕೆಟ್ಟು ಹೋದ ಕಾರಿನಿಂದ ಕದ್ದ ಗೋವುಗಳ ಇಳಿಸಿ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ಇಬ್ಬರು ಗೋಕಳ್ಳರನ್ನು ಹುಡುಕಿ ಕಾರು ಸಮೇತ ಬಂಧಿಸಿದ್ದಾರೆ.
ಪುತ್ತೂರು : ಕೆಟ್ಟು ಹೋದ ಕಾರಿನಿಂದ ಕದ್ದ ಗೋವುಗಳ ಇಳಿಸಿ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ಇಬ್ಬರು ಗೋಕಳ್ಳರನ್ನು ಹುಡುಕಿ ಕಾರು ಸಮೇತ ಬಂಧಿಸಿದ್ದಾರೆ.

ತಡ ರಾತ್ರಿ ಗೋವುಗಳನ್ನು ಅಕ್ರಮವಾಗಿ ಸಾಗಿಸುವ ವೇಳೆಯಲ್ಲಿ, ವಾಹನ ರಸ್ತೆಯಲ್ಲಿ ಕೆಟ್ಟುಹೋಗಿತ್ತು. ಈ ಸಂದರ್ಭ ಹೆದರಿ್ ಗೋವು ಕಳ್ಳರು ವಾಹನದಲ್ಲಿದ್ದ ಗೋವುಗಳನ್ನು ನರಿಮೊಗರು ಎಂಬಲ್ಲಿ ನಡುರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದರು. ಗೋವುಗಳನ್ನು ಯಾರೋ ಕಳ್ಳರು ಕದ್ದು ತಂದಿರಬಹುದೆಂದು ಸಂಶಯದಿಂದ, ಕೃತ್ಯವೆಸಗಿದ ಆರೋಪಿಗಳನ್ನು ಪತ್ತೆಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಮಂಗಳೂರು ಉಳ್ಳಾಲದ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್ ಲತೀಫ್ (25) ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳು ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ 4 ಕರುಗಳನ್ನು ಹಾಗೂ ಒಂದು ದನವನ್ನು ಸಾಗಿಸುವ ವೇಳೆ ವಾಹನ ಕೆಟ್ಟು ಹೋಗಿದ್ದರಿಂದ ಆರೋಪಿಗಳು ಜಾನುವಾರುಗಳನ್ನು ರಸ್ತೆಯಲ್ಲಿ ಬಿಟ್ಟು ವಾಹನದೊಂದಿಗೆ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ವಶಕ್ಕೆ ಪಡೆದು, ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.